ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
2 months agoon
By
Akkare Newsಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ ಸಿಮ್ ಗಳನ್ನು ಸರಬರಾಜು ಮಾಡುತ್ತಿದ್ದ ಮಡಿಕೇರಿಯ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಓರ್ವನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರೋಷನ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.
2018ರಿಂದ 2023ರ ವರೆಗೆ ಏರ್ ಟೆಲ್ ಸಿಮ್ ಡಿಸ್ಟ್ರಿಬ್ಯುಟರ್ ಆಗಿದ್ದ ಈತ ನಂತರ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಆಗಿದ್ದಾನೆ.
ವಂಚನೆ ಬೆಳಕಿಗೆ ಬಂದಿದ್ದು ಹೇಗೆ?
ಇತ್ತೀಚಿಗೆ ಕೇರಳದ ವ್ಯಕ್ತಿಯೊಬ್ಬರು ಆನ್ ಲೈನ್ ವಂಚಕರಿಂದ ಬರೋಬರಿ 1 ಕೋಟಿಗಿಂತಲೂ ಹೆಚ್ಚಿನ ಹಣವನ್ನು ಕಳೆದುಕೊಂಡಿದ್ದರು. ಪ್ರಕರಣ ದಾಖಲಾಗಿ ತನಿಖೆ ಕೈಗೊಂಡಾಗ ಮಡಿಕೇರಿಯ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಅಬ್ದುಲ್ ರೋಷನ್ ಅಲ್ಲಿನ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈತನಿಂದ ಸಾವಿರಾರು ಸಂಖ್ಯೆಯ ಸಿಮ್ ಗಳು ಸೇರಿದಂತೆ 150 ಚೈನಾ ಮೇಡ್ ಮೊಬೈಲ್ ಮತ್ತು ಆರು ಬಯೋಮೆಟ್ರಿಕ್ ಸ್ಕ್ಯಾನರ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈತ ಆನ್ ಲೈನ್ ದಗಾಕೋರರಿಗೆ ಗ್ರಾಹಕರ ಬದಲಿ ಸಿಮ್ ಗಳನ್ನು ಸರಬರಾಜು ಮಾಡುತ್ತಾ ಕೈತುಂಬಾ ದುಡ್ಡು ಎಣಿಸುತ್ತಿದ್ದ. ಇದೀಗ ತಗಲಾಕಿಕೊಂಡು ಕಂಬಿ ಎಣಿಸುತ್ತಿದ್ದಾನೆ.
ಈ ದಂಧೆಯ ಮೂಲಕ ಲಕ್ಸ ಲಕ್ಷ ಹಣ ಸಂಪಾದಿಸುತ್ತಿದ್ದ ಅಬ್ದುಲ್ ರೋಷನ್ ವಿರುದ್ಧ ಈಗಾಗಲೇ ಮಡಿಕೇರಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.
ನಕಲಿ ಸಿಮ್ ಜಾಲವನ್ನು ಭೇದಿಸಿರುವ ಕೇರಳ ಪೊಲೀಸ್ ಅಧಿಕಾರಿಗಳ ಇದೀಗ ನಮ್ಮ ಜಿಲ್ಲೆಯ ಮಡಿಕೇರಿಯ ಆರೋಪಿಯನ್ನು ಬಂಧಿಸಿ ಮತ್ತಷ್ಟು ಮಾಹಿತಿಯನ್ನು ಕಲೆ ಹಾಕಿದ್ದಾರೆ ಈತನಿಗೆ ಸಹಕಾರ ನೀಡಿದ ಇತರರ ಬಗ್ಗೆ ಕೂಡ ಮಾಹಿತಿ ಪಡೆದುಕೊಳ್ಳುತ್ತಿದ್ದು ಹಲವರು ಬಂಧನ ಆಗುವ ಸಾಧ್ಯತೆ ಇದೆ. ಕೇರಳ ರಾಜ್ಯದಲ್ಲಿ ಇದೊಂದು ದೊಡ್ಡ ಅಕ್ರಮ ದಂದೆಯ ಪ್ರಕರಣವಾಗಿದ್ದು ಕೇರಳ ಪೊಲೀಸರು ತೀವ್ರ ಸ್ವರೂಪದ ವಿಚಾರಣೆಯನ್ನು ಕೈಗೊಂಡಿದ್ದಾರೆ.