ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಊರಿನ ಸುದ್ದಿಗಳು

ಪುತ್ತೂರು ನಗರ ವ್ಯಾಪ್ತಿಯಲ್ಲಿ ಗಾಳಿಮಳೆ, ಉರ್ಲಾಂಡಿಯಲ್ಲಿ ಮರ ಬಿದ್ದು ಮನೆಗೆ ಹಾನಿ, ಸಿಂಗಾಣಿಯಲ್ಲಿ ಮನೆ ಮಾಡು ಜಖಂ ಶಾಸಕರಾದ ಅಶೋಕ್ ಕುಮಾರ್ ರೈ ಭೇಟಿ

Published

on

ಪುತ್ತೂರು: ಭಾನುವಾರ ಸಂಜೆ ಪುತ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿ ಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ ಶೀಟು ಗಾಳಿಗೆ ಹಾರಿ ಹೋಗಿದ್ದು, ಉರ್ಲಾಂಡಿಯಲ್ಲಿ ಶೋಭಾ ಹೆಗ್ಡೆ ಎಂಬವರ ಮನೆಯ
ಮೇಲೆ ಮರ ಬಿದ್ದು ಬಾಗಶ: ಜಖಂಗೊಂಡಿದೆ.

ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಸಿಂಗಾನಿಯ ಕಮಲ ಅವರ ಮನೆಗೆ ತಾತ್ಕಾಲಿಕವಾಗಿ ಶಾಸಕರು ಟರ್ಪಾಲ್ ಹಾಕಿಸಿದ್ದಾರೆ.

ಉರ್ಲಾಂಡಿಗೆ ಭೇಟಿ ನೀಡಿದ ಶಾಸಕರು ಮನೆ ಮೇಲೆ ಬಿದ್ದಿರುವ ಮರವನ್ನು ತಕ್ಷಣ ತೆರವು ಮಾಡುವಂತೆ ಸೂಚನೆಯನ್ನು ನೀಡಿದ್ದಾರೆ. ತಾತ್ಕಾಲಿಕವಾಗಿ ಎರಡೂ ಮನೆಗೂ ನೆರವಿನ ಭರವಸೆಯನ್ನು ನೀಡಿದ್ದಾರೆ.ಬಿಸಿಲಿನಿಂದ ಕಂಗೆಟ್ಟಿದ್ದ ಪುತ್ತೂರು ಜನತೆಗೆ ಮೊದಲ
ಮಳೆಯೇ ಶಾಕ್ ಕೊಟ್ಟಿದೆ.







ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರಾದ ದಿನೇಶ್ ಪಿ ವಿ, ಮೋನು ಬಪ್ಪಳಿಗೆ, ಇಸ್ಮಾಯಿಲ್ ಬೊಳುವಾರು, ವಿಲ್ಪಿ, ಕೇಶವ ಉಲಾಂಡಿ, ಕುಮಾರ್ ಉರ್ಲಾಂಡಿ, ಸೂರ್ಯ, ವಿಡ್ ಪೆರ್ನಾಂಡಿಸ್‌, ಶ್ರೀಕಾಂತ್, ಉಪಸ್ತಿತರಿದ್ದರು. ದೀಕ್ಷಿತ್ ಮೊದಲಾದವರು

Continue Reading
Click to comment

Leave a Reply

Your email address will not be published. Required fields are marked *

Advertisement