ಅಂತರರಾಷ್ಟ್ರೀಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ ; 30 31 ರಂದು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ವಿಜಯ - ವಿಕ್ರಮ ಕಂಬಳ ಆಹಾರ ಮೇಳ .ಕೃಷಿ ಮೇಳ.ವಿವಿಧ ಖಾದ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಅಂತರರಾಷ್ಟ್ರೀಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ ಆಚರಣೆ , ಮಕ್ಕಳಿಗೆ ಜೀವನ ಶಿಕ್ಷಣ ನೀಡಿ - ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನ ; ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ಅಂತರರಾಷ್ಟ್ರೀಯ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸ್ಥಳೀಯ
ವಿಟ್ಲ ಪೊಲೀಸ್ ಠಾಣೆ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ರಿಂದ ಮೂವರು ಅಂತರಾಜ್ಯ ಕಳ್ಳರ ಬಂಧನಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸಲು ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಶಾಖೆಗಳನ್ನು ತೆರೆಯುವಂತೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೋಮವಾರ ಬ್ಯಾಂಕುಗಳಿಗೆ ಕರೆಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಅನಿವಾಸಿ ಭಾರತೀಯರಿಗೆ ಜೀವನ ಭದ್ರತೆಯ ಜೊತೆಗೆ ಮತದಾನದ ಅವಕಾಶವನ್ನೂ ಕಲ್ಪಿಸಿ ಅಧಿವೇಶನದಲ್ಲಿ ಅನಿವಾಸಿ ಭಾರತೀಯರ ಪರ ವಾದಮಂಡಿಸಿದ ಶಾಸಕ ಅಶೋಕ್ ರೈಅಂತರರಾಷ್ಟ್ರೀಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಯುನೈಟೆಡ್ ಅರಬ್ ಎಮಿರೇಟ್ಸ್ ರಾಜಧಾನಿ ಅಬುಧಾಬಿಯಲ್ಲಿ ಬೋಚಸನ್ಯಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಹೆಸರಿನಲ್ಲಿ ನಿರ್ಮಿಸಲಾದ ಅತಿದೊಡ್ಡ ಹಿಂದೂ ದೇವಾಲಯ ಮೋದಿಯವರಿಂದ ಉದ್ಘಾಟನಾ ಸಮಾರಂಭಅಂತರರಾಷ್ಟ್ರೀಯ ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ : ವಿಜಯ-ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತPublished
2 years agoon
By
Akkare News
ಉದ್ಯಮಿಗಳು, ಕೃಷಿಕರ ಭೇಟಿ- ಪುತ್ತೂರು ಅಭಿವೃದ್ದಿಯ ಬಗ್ಗೆಯೂ ಚರ್ಚೆ
ಪುತ್ತೂರು: ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಒಂದು ವರ್ಷ ಪೂರೈಸಿದ್ದೇನೆ. ನಾನು ಶಾಸಕನಾದ ಬಳಿಕ ನನ್ನ ನಡಿಗೆ ಹೇಗಿದೆ, ಜನರೊಂದಿಗೆ ಬೆರೆಯುವ ರೀತಿ, ನನ್ನಲ್ಲಿ ಏನಾದರೂ ತಪ್ಪಾಗಿದೆಯೇ? ತಿದ್ದಿಕೊಳ್ಳುವಂತ ವಿಚಾರ ಏನಾದರೂ ಇದೆಯೇ? ಪುತ್ತೂರು ಅಭಿವೃದ್ದಿಯಾಗಬೇಕಾದರೆ ನಾನು ಏನು ಮಾಡಬೇಕು? ಪುತ್ತೂರು ಕ್ಷೇತ್ರದಲ್ಲಿರುವ ಮುಖ್ಯ ಸಮಸ್ಯೆಯಾದರೂ ಏನು? ಚುನಾವಣೆಗೆ ಮೊದಲು ನಾನು ನಿಮ್ಮಲ್ಲಿ ಹೇಳಿದ ವಿಚಾರವನ್ನು ಪಾಲನೆ ಮಾಡಿದ್ದೇನೆಯೇ? ಮೊದಲಾದ ವಿಚಾರಗಳನ್ನುಮುಂದಿಟ್ಟು ಸ್ವತ ಶಾಸಕರೇ ತನ್ನ ನಡಿಗೆಯ ಬಗ್ಗೆ ತಿಳಿಯಲು ಒಂದಷ್ಟು ಉದ್ಯಮಿಗಳು, ಕೃಷಿಕರ ಬಳಿ ತೆರಳಿ ಮಾತುಕತೆ ನಡೆಸಿದ್ದಾರೆ. ಈ ಮಾತುಕತೆಯ ವಿವರ ಹೀಗಿದೆ

ನೀವು ಶಾಸಕರಾದ ಬಳಿಕ ನಿಮ್ಮ ಕೊರತೆಯನ್ನು ಯಾರೂ ಹೇಳುತ್ತಿಲ್ಲ ಮತ್ತು ಹೇಳಿದ್ದು ನನ್ನ ಗಮನಕ್ಕೆ ಬಂದಿಲ್ಲ,ಚೆನ್ನಾಗಿ ಕೆಲಸ ಮಾಡುತ್ತಿದ್ದೀರಿ, ಮನೆ ಇಲ್ಲದವರಿಗೆ ಗ್ರಾಮದಲ್ಲಿ ಜಾಗ ಗುರುತಿಸಿ ಅವರಿಗೆ ಸೂರು ಕಲ್ಪಿಸುವ ಯೋಜನೆ ಅತ್ಯುತ್ತಮವಾಗಿದೆ. ನೀವು ಎಂದೂ ಕಾರ್ಯಕರ್ತರನ್ನು ಕಡೆಗಣಿಸಬೇಡಿ, ಕಾರ್ಯಕರ್ತರನ್ನು ಕಡೆಗಣಿಸಿದರೆ ಮುಂದೆ ಬರಲು ಯಾರಿಗೂಐ ಸಾಧ್ಯವಿಲ್ಲ. ಸಭೆ ಸಮಾರಂಭಗಳಲ್ಲಿ ಹೆಚ್ಚು ಹೊತ್ತು ಕಾಲ ಕಳೆಯಬೇಡಿ, ವಾರಕ್ಕೊಂದು ಬಾರಿ ಅಥವಾ ತಿಂಗಳಿಗೊಂದು ಬಾರಿ ಒಂದೊಂದು ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಸಮಸ್ಯೆ, ರಸ್ತೆ, ಸೇರಿದಂತೆ ಎಲ್ಲವನ್ನೂ ಅರಿತುಕೊಳ್ಳುವ ಕೆಲಸವನ್ನು ಮಾಡಿ, ಮೆಡಿಕಲ್ ಕಾಲೇಜು ನಿಮ್ಮ ಅವಧಿಯಲ್ಲಿ ಆಗಿಯೇ ಆಗ್ತದೆ ಎಂಬ ಪೂರ್ಣ ನಂಬಿಕೆ ಇದೆ. ಗ್ರಾಮದಲ್ಲಿ ನಡೆಯುವ ಕಾಮಗಾರಿಯನ್ನು ಗ್ರಾಮದವರಿಗೆ ನೀಡಬೇಕು ಮತ್ತು ಎಸ್ ಸಿ ಎಸ್ ಎಸ್ ಟಿ ಸಮುದಾಯದವರು ಜಾಗವನ್ನು ಇತರರಿಗೆ ಮಾರಾಟ ಮಾಡಬಾರದು ಎಂಬ ಕಾನೂನಿನಲ್ಲಿ ಬದಲಾವಣೆ ಮಾಡಬೇಕು ಅವರೂ ಅಭಿವೃಧ್ದಿಯಾಗಬೇಕು, ಅವರೂ ನಮ್ಮ ಹಾಗೇ ಈ ಬಗ್ಗೆ ಸರಕಾರದ ಗಮನಸೆಳೆಯುವ ಕೆಲಸವನ್ನು ಮಾಡಬೇಕು . ನಿಮ್ಮ ಬಗ್ಗೆ ಯಾರಿಗೂ ಇದುವರೆಗೂ ಕೆಟ್ಟ ಅಭಿಪ್ರಾಯವೇ ಇಲ್ಲ
ಜನಾರ್ಧನ ಭಟ್ ಸೇಡಿಯಾಪು, ಪ್ರಗತಿಪರ ಕೃಷಿಕರು


ಎಲ್ಲಾ ಜಾತಿ, ಧರ್ಮದವರನ್ನು ಒಂದೇ ರೀತಿಯಾಗಿ ಕಾಣುವ ನಿಮ್ಮ ಶೈಲಿ ಅತ್ಯುತ್ತಮವಾಗಿದೆ.ಬಡವರ ಬಲ್ಲಿದನೆಂಬ ಭೇದವಿಲ್ಲದೆ ಎಲ್ಲರನ್ನೂ ಗೌರವಿಸುವ ನಿಮ್ಮ ಪೃವೃತ್ತಿ ಎಲ್ಲರೂ ಮೆಚ್ಚುವಂತದ್ದಾಗಿದೆ, ನಿಮ್ಮ ಬಳಿಗೆ ಸಹಾಯ ಕೇಳಿ ಬರುವ ಬಡವರಿಗೆ ಸ್ಥಳದಲ್ಲೇ ಸ್ಪಂದನೆ ನೀಡುವುದನ್ನು ಮುಂದುವರೆಸಿ, ನಿಮ್ಮಲ್ಲಿ ನಾಯಕತ್ವ ಗುಣವಿದ್ದ ಕಾರಣಕ್ಕೆ ನೀವು ಕಡಿಮೆ ಅವಧಿಯಲ್ಲಿ ಹೆಚ್ಚು ಜನರನ್ನು ತಲುಪುವುದಕ್ಕೆ ಸಾಧ್ಯವಾಗಿದೆ. ಈಗಿನ ನಿಮ್ಮ ಶೈಲಿ ಅತ್ಯುತ್ತಮವಾಗಿದ್ದು ಅದನ್ನೇ ಮುಂದುವರೆಸಿ.
ಪುತ್ತೂರಿಗೆ ಒಂದು ಹೆಲಿಪ್ಯಾಡ್ನ ಅಗತ್ಯವಿದೆ ಅದು ನಿಮ್ಮ ಅವಧಿಯಲ್ಲಿ ನಿರ್ಮಾಣವಾಗಬೇಕು ಮತ್ತು ನಗರದಲ್ಲಿ ಟ್ರಾಫಿಕ್ ಸಮಸ್ಯೆಗೆ ಬ್ರೇಕ್ ಹಾಕಬೇಕು. ಅಭಿವೃದ್ದಿಯ ವಿಚಾರದಲ್ಲಿ ನಿಮಗೆ ನೂರು ಮಾರ್ಕ್ ಕೊಡುತ್ತೇವೆ.
ಲಾರೆನ್ಸ ಮಸ್ಕರೇನಸ್ ,ಧರ್ಮಗುರುಗಳು, ಮಾಯಿದೆದೇವುಸ್ ಚರ್ಚ್, ಪುತ್ತೂರು


ನೀವು ಶಾಸಕರಾದ ಬಳಿಕ ಬಹಳಷ್ಟು ಅಭಿವೃದ್ದಿ ಕೆಲಸಗಳು ನಡೆದಿದೆ. ನೀವು ಕರ್ನಾಟಕದ ಮುಖ್ಯಮಂತ್ರಿಯಾಗಲು ಯೋಗ್ಯತೆಯನ್ನು ಹೊಂದಿದ್ದೀರಿಪುತ್ತೂರಿಗೆ ಮೆಡಿಕಲ್ ಕಾಲೇಜು ಬರಬೇಕು, ಮಾಣಿಯಿಂದ ಚತುಷ್ಪಥ ರಸ್ತೆ ನಿರ್ಮಾಣವಾಗಬೇಕು, ಪುತ್ತೂರಿನಲ್ಲಿ ಉದ್ಯಮಗಳ ಬೆಳೆಯುವಲ್ಲಿ ನೀವು ಮುತುವರ್ಜಿವಹಿಸಬೇಕು. ನಿಮ್ಮ ಬಗ್ಗೆ ಎಲ್ಲಾ ಸಮುದಾಯದವರಿಗೂ ಒಳ್ಳೆಯ ಅಭಿಪ್ರಾಯವಿದೆ. ನಿಮ್ಮ ಈಗಿನ ನಡೆ ಚೆನ್ನಾಗಿಯೇ ಇದೆ.
ಮಹಮ್ಮದ್ ಹಾಜಿ , ಪುತ್ತೂರು ಟಿಂಬರ್, ಉದ್ಯಮಿಗಳು

ಡಿ ವಿಯವರು ಪ್ರಥಮಬಾರಿಗೆ ಶಾಸಕರಾದಾಗ ಹೀಗೇ ಮಾಡಿದ್ರು
ಡಿ ವಿ ಸದಾನಂದ ಗೌಡರು ಪ್ರಥಮ ಬಾರಿಗೆ ಶಾಸಕರಾದಾಗ ನಿಮ್ಮ ಹಾಗೆ ಪಕ್ಷ ಬೇದವಿಲ್ಲದೆ ಎಲ್ಲರ ಮನೆಗೂ ಭೇಟಿ ನೀಡುತ್ತಿದ್ದರು. ಬಿಜೆಪಿಯವರು ಸ್ವಲ್ಪ ತಲೆ ಖರ್ಚು ಮಾಡುತ್ತಿದ್ದರೆ ನೀವು ನಮ್ಮ ಜೊತೆ ಇರುತ್ತಿದ್ರಿ ಕಾಲ ಮಿಂಚಿ ಹೋಗಿದೆ. ನೀವು ಶಾಸಕನಾಗಿದ್ದೇ ದೊಡ್ಡ ಸಾಧನೆ, ಪುತ್ತಿಲ ವೋಟಿಗೆ ನಿಂತ ಕಾರಣ ನೀವು ಗೆದ್ದಿದ್ದಲ್ಲ ನಿಮಗೆ ದೈವ ಬಲವಿದೆ. ನಿಮಗೆ ಚುನಾವಣೆಯಲ್ಲಿ ಸ್ಪರ್ದಿಸಲು ಅವಕಾಶ ಸಿಕ್ಕಿದ್ದೇ ದೊಡ್ಡ ಸಾಧನೆಯಗಿದೆ. ಬಿಜೆಪಿ ಭದ್ರಕೋಟೆಯನ್ನು ಭೇದಿಸಿದ್ದೀರಿ, ನಿಮ್ಮ ನಾಯಕತ್ವ ಚೆನ್ನಾಗಿಯೇ ನಡೆಯುತ್ತಿದೆ. ಡಿ ವಿ ಇದೇ ರೀತಿ ಮಾಡಿದ ಕಾರಣ ಎರಡನೇ ಬಾರಿಗೂ ಶಾಸಕರಾಗಿ ಆಯ್ಕೆಯಾದರು.

ಅಡಿಕೆ ಬೋರ್ಡು ಸ್ಥಾಪನೆ ಮಾಡುವಲ್ಲಿ ಮುತುವರ್ಜಿವಹಿಸಿ, ಸಬ್ಸಿಡಿ ಕೃಷಿ ಮೆಕ್ಯಾನಿಸಂ ಆರಂಭವಾಗಬೇಕು, ಸಿಪಿಸಿಆರ್ಐ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಅದನ್ನು ಹೇಗಾದರೂ ಮಾಡಿ ಕೃಷಿಕರಿಗೆ ಪ್ರಯೋಜನವಾಗುವ ರೀತಿಯಲ್ಲಿ ಮಾಡಬೇಕು. ನಿಮ್ಮ ನಡೆ ಅತ್ಯುತ್ತಮವಾಗಿದೆ. ಗುಡ್ ಲಕ್
ವಿಶ್ವೇಶ್ವರ ಭಟ್ ಬಂಗಾರಡ್ಕ, ಪ್ರಗತಿಪರ ಕೃಷಿಕರು

ನಿಮ್ಮ ಗುರಿ ಚೆನ್ನಾಗಿಯೇ ಇದೆ ಅದನ್ನು ಮುಂದುವರೆಸಿ, ಶಾಸಕರಾಗಿ ಉತ್ತಮ ಕೆಲಸವನ್ನು ಮಾಡುತ್ತಿದ್ದೀರಿ, ಪುತ್ತೂರಿನಲ್ಲಿ ಭೃಷ್ಟಾಚಾರಕ್ಕೆ ಕಡಿವಾಣ ಹಾಕಿದ್ದೀರಿ, ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ನಿಮ್ಮ ಅವಧಿಯಲ್ಲೇ ಆಗಲಿದೆ ಎಂಬ ವಿಶ್ವಾಸ ನಮಗಿದೆ. ಒಂದುವರ್ಷದ ಶಾಸಕತ್ವದ ಅವಧಿಯಲ್ಲಿ ಚೆನ್ನಾಗಿ ಕೆಲಸ ಮಾಡಿದ್ದೀರಿ, ಎಲ್ಲರೊಂದಿಗೂ ಬೆರೆತು , ಪಕ್ಷ ಬೇಧವಿಲ್ಲದೆ ಜನರ ಸೇವೆ ಮಾಡಿದ್ದೀರಿ.

ಪುತ್ತೂರಿನಲ್ಲಿ ವಿದ್ಯುತ್ ಸಮಸ್ಯೆ ಸರಿಯಾಗಬೇಕಿದೆ, ನಗರಸಭೆಯಲ್ಲಿ ಉತ್ತಮ ಸೇವೆ ಸಿಗುವಂತೆ ನೋಡಿಕೊಳ್ಳಬೇಕು.ಪುತ್ತೂರಿನಲ್ಲಿ ಟೂರಿಸಂ ಸೃಷ್ಟಿಯಾಗಬೇಕು. ಟೂರಿಸಂ ಅಭಿವೃದ್ದಿಯಾದರೆ ಪುತ್ತೂರು ತನ್ನಿಂತಾನೆ ಅಭಿವೃದ್ದಿಯಾಗುತ್ತದೆ. ಹೆಚ್ಚು ಜನರನ್ನು ಆಕರ್ಷಿಸುವ ಕೇಂದ್ರವಾಗಿ ಪುತ್ತೂರು ರೂಪುಗೊಳ್ಳಬೇಕು ಇದಕ್ಕಾಗಿ ನಿಮ್ಮ ನೆರವು ಅಗತ್ಯವಿದೆ. ಪುತ್ತೂರಿನ ವಿದ್ಯಾವಂತಗರಿಗೆ ಉದ್ಯೋಗವಕಾಶವನ್ನು ಕಲ್ಪಿಸುವ ಉದ್ಯಮಗಳು ಇಲ್ಲಿ ಹೆಚ್ಚು ಬರಬೇಕಿದೆ.
ಜಿ ಎಲ್ ಬಲರಾಮ ಆಚಾರ್ಯ, ಸ್ವರ್ಣೋಧ್ಯಮಿಗಳು ಪುತ್ತೂರು
ನಿಮ್ಮ ಸ್ಪೀಡ್ ಸ್ವಲ್ಪ ಕಮ್ಮಿಯಾದ ಹಾಗೆ ಅನಿಸುತ್ತಿದೆ
ನೀವು ಶಸಕರಾಗಿ ಆರಂಭದಲ್ಲಿ ಇದ್ದ ಸ್ಪೀಡ್ ಈಗ ಕಮ್ಮಿಯಾಗಿದೆ ಎಂಬ ಅನಿಸಿಕೆ ನನ್ನದು. ಶಾಸಕರಾಗಿ ನಿಮ್ಮ ಬಗ್ಗೆ ಯಾರೂ ಕೆಟ್ಟ ಕಮೆಂಟ್ ಮಾಡಿಲ್ಲ ಮತ್ತು ಕೆಟ್ಟದಾಗಿ ಹೇಳಿದ್ದನ್ನು ನಾನು ಕೇಳಿಲ್ಲ. ನೀವು ಶಾಸಕರಾದ ಬಳಿಕ ಅದ್ಬುತ ನಿರೀಕ್ಷೆ ಇತ್ತು ಎಲ್ಲೋ ಎಡವಿದ ಹಾಗೆ ಕಾಣುತ್ತಿದೆ. ಪುತ್ತೂರು ನಗರಸಭೆಯಲ್ಲಿ ವ್ಯವಸ್ಥಿತ ಆಡಳಿತವಿಲ್ಲ, ನಗರಸಭಾ ವ್ಯಾಪ್ತಿಯ ಅನೇಕ ಕಾಮಗಾರಿಗಳು ಪೆಂಡಿಂಗ್ ಇದೆ. ಜಲಸಿರಿ ಯೋಜನೆಯ ಕೆಲಸಗಳು ವ್ಯವಸ್ತಿತವಾಗಿ ಆಗುತ್ತಿಲ್ಲ ಹೀಗೇ ಕೆಲವೊಂದು ವಿಚಾರದಲ್ಲಿ ಸ್ವಲ್ಪ ಹಿನ್ನಡೆಯಾದಂತಿದೆ.

ನಿಮ್ಮ ಶಾಸಕತ್ವದ ಒಂದು ವರ್ಷದ ಅವಧಿ ತೃಪ್ತಿದಾಯಕವಾಗಿದೆ. ನಿಮ್ಮ ತಾಳ್ಮೆಗೆ ನಾನು ಮೆಚ್ಚಿದ್ದೇನೆ, ಸಮಾಧಾನದಿಂದ ಎಲ್ಲವನ್ನೂ ನಿಭಾಯಿಸಿಕೊಂಡು ಹೋಗುತ್ತಿದ್ದೀರಿ, ಪುತ್ತೂರಿನಲ್ಲಿ ಭೃಷ್ಟಾಚಾರಗಳು ಸ್ಥಗಿತವಾಗಿದೆ, ಅಧಿಕಾರಿಗಳಿಗೆ ಭಯವಿದೆ, ನೀವು ಭೃಷ್ಟಾಚಾರಿಯಲ್ಲ ಎಂದು ಪುತ್ತೂರಿನ ಪ್ರತೀಯೊಬ್ಬ ನಾಗರಿಕನಿಗೂ ಗೊತ್ತಿರುವ ವಿಚಾರವಾಗಿದೆ ಮತ್ತೆ ನಿಮ್ಮ ಜನಸ್ಪಂದನೆ ಸೂಪರ್ ಆಗಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ದಿಯಾಗುವ ನಿಮ್ಮ ಕನಸು ನನಸಾಗಲಿ, ಮೆಡಿಕಲ್ ಕಾಲೇಜು ನಿಮ್ಮ ಅವಧಿಯಲ್ಲೇ ಆಗಲಿಪುತ್ತೂರಿನಲ್ಲಿ ಒಳಚರಂಡಿ ವ್ಯವಸ್ಥೆ ಅಭಿವೃದ್ದಿಯಾಗಬೇಕು ಮತ್ತು ಪುತ್ತೂರಿನಲ್ಲಿ ಟೂರಿಸಂ ಬೆಳೆಯಬೇಕು.
ಗೋಪಾಲಕೃಷ್ಣ ಹೆರಳೆ, ಹೊಟೇಲ್ ಉದ್ಯಮಿಗಳು, ಪುತ್ತೂರು
—————————————————————————————————————–
ನಿಮ್ಮ ಒಂದು ವರ್ಷದ ಶಾಸಕ ಅವಧಿ ಕಳಂಕ ರಹಿತವಾಗಿದೆ.ಅಭಿವೃದ್ದಿಯೇ ಸಕ್ಸಸ್ ಗೆ ದಾರಿಯಗುತ್ತದೆ. ನಿಮ್ಮ ಬಳಿ ಸಹಾಯ ಕೇಳಿ ಬರುವ ಜನರಿಗೆ ನೀವು ಕೊಡುವ ಸ್ಪಂದನೆ ಗ್ರೇಟ್ ಅದನ್ನೇ ಮುಂದುವರೆಸಿ. ಸಹಾಯ ಕೇಳಿ ಯಾರೇ ಬಂದರೂ ಅವರನ್ನು ಸಮಾಧಾನ ಮಾಡಿ ಕಳುಹಿಸುವ ನಿಮ್ಮ ಮನಸ್ಸು ಉತ್ತಮವಾಗಿದೆ. ಯಾರನ್ನೂ ಬಯ್ಯಬಾರದು, ಬಯ್ಯುವುದು ರಾಜಕೀಯದಲ್ಲಿ ಇಒರಬಾರದು ನೀವು ಯಾವತ್ತೂ ಇದನ್ನು ಮೈಗೂಡಿಸಿಕೊಳ್ಳಬೇಡಿ, ನೀವು ಈಗ ಪಾಲಿಸಿಕೊಂಡು ಬರುತ್ತಿರುವ ನಡೆಯನ್ನೇ ಮುಂದುವರೆಸಿದರೆ ಅದುವೇ ನಿಮ್ಮ ಗೆಲುವಿಗೆ ಹಾದಿಯಾಗಲಿದೆ.

ಪುತ್ತೂರಿನಲ್ಲಿ ಉದ್ಯಮ ಬೆಳೆಯಬೇಕು, ಕೆಎಂಎಫ್ ತಂದಿರುವುದು ಉತ್ತಮ ಯೋಜನೆಯಾಗಿದೆ. ಪುತ್ತೂರಿನಲ್ಲಿ ಇಂಡಸ್ಟ್ರೀಯಲ್ ಎಸ್ಟೇಟ್ ಆರಂಭ ಮಾಡುವ ಮೂಲಕ ಒಂದಷ್ಟು ಜನರಿಗೆ ಉದ್ಯೋಗವನ್ನು ಕೊಡುವುದಕ್ಕೆ ಪ್ರಯತ್ನ ಮಾಡಿದರೆ ಉತ್ತಮ.
ಸತ್ಯಶಂಕರ್ ಕೆ, ಮೆನೆಜಿಂಗ್ ಡೈರೆಕ್ಟರ್, ಬಿಂದು ಫ್ಯಾಕ್ಟರಿ, ನರಿಮೊಗರು