ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಸುಳ್ಯ ಅಕ್ರಮ ಜಾನುವಾರು ಸಾಗಾಟ ಪತ್ತೆ ಹಚ್ಚಿದ ಸಾರ್ವಜನಿಕರು

Published

on

ಪಿಕಪ್ ನಲ್ಲಿ ದನಗಳನ್ನು ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಸ್ಥಳೀಯರು ಪತ್ತೆಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಲೂರು ಕೆಮ್ರಾಜೆ ಗ್ರಾಮದ ಎಲಿಮಲೆ ಎಂಬಲ್ಲಿ ವರದಿಯಾಗಿದೆ.
ಎಲಿಮಲೆಯ ಅಂಬೆಕಲ್ಲು ಕಡೆಯಿಂದ 4 ದನಗಳನ್ನು ರಾತ್ರಿ 3 ಗಂಟೆಯ ವೇಳೆಗೆ (ಕೆಎ 21 ಎ 0824) ಪಿಕ್‌ಅಪ್ ವಾಹನದಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದ ವೇಳೆ ಮಾಹಿತಿ ತಿಳಿದ ಸ್ಥಳೀಯ ಯುವಕರು ಎಲಿಮಲೆ ಅಂಬೆಕಲ್ಲು ರಸ್ತೆಯ ಕಲ್ಲುಪಣೆ ಎಂಬಲ್ಲಿ ವಾಹನವನ್ನು ಅಡ್ಡ ಗಟ್ಟಿದರು.



ಈ ವೇಳೆ ಇಬ್ಬರು ಪರಾರಿಯಾಗಿದ್ದು ಇಬ್ಬರನ್ನು ಸ್ಥಳೀಯರು ಹಿಡಿದರೆಂದು ತಿಳಿದು ಬಂದಿದೆ. ಪುತ್ತೂರಿನ ಹರೀಶ್ ಮತ್ತು ಕೋಣಾಜೆಯ ಇಬ್ರಾಹಿಂ ಎಂಬವರನ್ನು ಸ್ಥಳೀಯರು ಹಿಡಿದಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement