ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕ್ರೈಮ್ ನ್ಯೂಸ್

ಕನ್ಯಾನ ವ್ಯಕ್ತಿಯ ಸಾವಿನಲ್ಲಿ ಅನುಮಾನ; ಸಹೋದರನ ದೂರು; ತನಿಖೆಗೆ ಮುಂದಾದ ಪೊಲೀಸರು

Published

on

ಕನ್ಯಾನ ಬಳಿಯ ಸುಂಕದಕಟ್ಟೆ ಮಜೀರ್ಪಳ್ಳ ನಿವಾಸಿ ಅಶ್ರಫ್‌ (44) ಎಂಬುವವರು ಮೇ.6 ರಂದು ಮೃತ ಹೊಂದಿದ್ದು, ಅದೇ ದಿನ ಸಂಜೆ ಕನ್ಯಾನ ಬಂಡಿತ್ತಡ್ಕದ ರಹ್ಮಾನಿಯಾ ಜುಮ್ಮಾ ಮಸೀದಿಯಲ್ಲಿ ದಫನ ಕೂಡಾ ಮಾಡಲಾಗಿತ್ತು. ಆದರೆ ಈ ಸಾವಿನಲ್ಲಿ ಅನುಮಾನ ವ್ಯಕ್ತಪಡಿಸಿದ ಮೃತರ ಸಹೋದರ ಇಬ್ರಾಹಿಂ ಅವರು ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದರು.



ಇದೀಗ ಪ್ರಕರಣ ದಾಖಲಿಸಿದ ಮಂಜೇಶ್ವರ ಪೊಲೀಸರು, ದಫನಗೊಂಡ ದೇಹವನ್ನು ಮೇಲಕ್ಕೆತ್ತಿ ಶವ ಪರೀಕ್ಷೆ ನಡೆಸಲು ನಿರ್ಧಾರ ಮಾಡಿದ್ದು, ಈ ಕಾರಣದಿಂದ ನ್ಯಾಯಾಲಯದ ಆದೇಶ ಪಡೆದು ಮಂಜೇಶ್ವರ ಪೊಲೀಸರು ರಹ್ಮಾನಿಯಾ ಜುಮ್ಮಾ ಮಸೀದಿಗೆ ಗುರುವಾರ ಬೆಳಗ್ಗೆ ಆಗಮಿಸಿದ್ದು, ಜೊತೆಗೆ ಮಂಗಳೂರಿನ ಯೆನೋಪಯ ಆಸ್ಪತ್ರೆಯ ಫಾರೆನ್ಸಿಕ್‌ ವಿಭಾಗದ ಸಿಬ್ಬಂದಿಗಳು, ಕಾಸರಗೋಡು ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತನಿಖೆಗೆ ನೆರವು ನೀಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement