Published
2 years agoon
By
Akkare News
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ಅಳಿಕೆ ವಲಯದ ಕನ್ಯಾನ ಬಿ ಕಾರ್ಯಕ್ಷೇತ್ರದ ದೆಲಂತಬೆಟ್ಟು ರಂಜಿತ್ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ವಿಟ್ಲ ತಾಲೂಕಿನ ಯೋಜನಾಧಿಕಾರಿ ರಮೇಶ್, ಕನ್ಯಾನ ಬಿ ಒಕ್ಕೂಟ ಉಪಾಧ್ಯಕ್ಷ ಚಂದ್ರ, ಅಳಿಕೆ ವಲಯ ಮೇಲ್ವಿಚಾರಕಿ ಮಾಲತಿ, ಪದಾಧಿಕಾರಿ ಶಂಕರ್, ಒಕ್ಕೂಟ ಸೇವಾ ಪ್ರತಿನಿಧಿ ಪೂರ್ಣಿಮಾ ಮೊದಲಾದವರು ಉಪಸ್ಥಿತರಿದ್ದರು.