ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಮಂಗಳೂರು: ಸೋಲಿನ ನೈತಿಕ ಹೊಣೆ ನಾನೇ ಹೊರುವೆ – ಪದ್ಮರಾಜ್ ಪೂಜಾರಿ

Published

on

ಮಂಗಳೂರು ಜೂನ್ 05 :ಲೋಕಸಭೆ ಚುನಾವಣೆಯಲ್ಲಿ ದಕ್ಷಿಣಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಆದ ಸೋಲಿಗೆ ಯಾರನ್ನೂ ದೂಷಿಸುವುದಿಲ್ಲ. ಸೋಲಿನ ನೈತಿಕ ಹೊಣೆಯನ್ನು ನಾನೇ ಹೊರುತ್ತೇನೆ‌ ಎಂದು ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹೇಳಿದ್ದಾರೆ.ಮಂಗಳೂರಿನಲ್ಲಿ ಮಾತನಾಡಿದ ಅವರು ಎಲ್ಲಾ ಕ್ಷೇತ್ರಗಳಿಗೆ ಹೋಗಿ ಸರಿಯಾಗಿ ಪ್ರಚಾರ ಮಾಡಲು ಸಾಧ್ಯವಾಗದಿರುವುದೇ ತನಗೆ ಮತ ಕಡಿಮೆಯಾಗಲು ಕಾರಣ. ನಾನು ಸೋತರೂ ರಾಷ್ಟ್ರಮಟ್ಟದ ನಾಯಕರು ನನಗೆ ಕರೆ ಮಾಡಿ ಧೈರ್ಯ ತುಂಬಿರುವುದು ಸಂತಸ ತಂದಿದೆ ಎಂದರು. ಕಾಂಗ್ರೆಸ್ ಪಕ್ಷ ಸಂಘಟನೆ ಸ್ವಲ್ಪ ದುರ್ಬಲವಾಗಿದ್ದು, ಮುಂದಿನ ಒಂದು ವರ್ಷದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಶಕ್ತಿಮೀರಿ ಪ್ರಯತ್ನಿಸುತ್ತೇನೆ. ಎಲ್ಲಾ ಬೂತ್ ಗಳಿಗೆ ಹೋಗಿ ಮುಂದಿನ ಒಂದುವರೆ ವರ್ಷದಲ್ಲೇ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುತ್ತೇನೆ. ಒಳ್ಳೆಯ ಕೆಲಸ ಯಾರೂ ಮಾಡಿದರೂ ಅನುಕರಣೆ ಮಾಡಬೇಕು. ಆದ್ದರಿಂದ ಬಿಜೆಪಿಯ ಸಂಘಟನೆಯ ಮಾದರಿಯಲ್ಲೇ ಪಕ್ಷ ಬಲಿಷ್ಠ ಮಾಡುವ ಕಾರ್ಯ ಮಾಡಲಿದ್ದೇವೆ ಎಂದು ದ.ಕ‌.ಜಿಲ್ಲೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.

ಸಂಸದ ಬ್ರಿಜೇಶ್ ಚೌಟರಲ್ಲಿ ಹೇಳುವುದೇನೆಂದರೆ ತಾವು  ದ.ಕ.ಜಿಲ್ಲೆಯ ಅಭಿವೃದ್ಧಿಗೋಸ್ಕರ ಏನೇ ಕೆಲಸ ಮಾಡಿದರೂ ನಾನು ನಿಮ್ಮೊಂದಿಗೆ ಇರಲಿದ್ದೇನೆ‌. ಅದರೊಂದಿಗೆ ಜಿಲ್ಲೆಯ ಸಾಮರಸ್ಯ ಗತವೈಭವವನ್ನು ಮರಳಿ ತರುವಲ್ಲಿ ತಮ್ಮ ಸಹಕಾರವೂ ಅಗತ್ಯ ಎಂದು ಹೇಳಿದರು.

 

 

Continue Reading
Click to comment

Leave a Reply

Your email address will not be published. Required fields are marked *

Advertisement