Published
2 years agoon
By
Akkare News


ಪ್ರಜ್ವಲ್ ಸೂಕ್ತ ರೀತಿಯಲ್ಲಿ ಸ್ಪಂದಿಸದ ಹಿನ್ನೆಲೆಯಲ್ಲಿ ವಿಚಾರಣೆಗೆ ಕೊಂಚ ಹಿನ್ನಡೆಯಾಗಿದೆ. ಪ್ರಕರಣದಲ್ಲಿ ಕೃತ್ಯ ನಡೆದ ಸ್ಥಳಕ್ಕೆ ಆರೋಪಿಯನ್ನು ಕರೆದೊಯ್ದು ಮಹಜರು ನಡೆಸಬೇಕಿದೆ. ಹೀಗಾಗಿ ಎಸ್ಐಟಿಯು ಗುರುವಾರ ಪ್ರಜ್ವಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ಕಸ್ಟಡಿಗೆ ನೀಡುವಂತೆ ಕೋರ್ಟ್ಗೆ ಮನವಿ ಮಾಡಿದೆ. ಇದಾದ ಬಳಿಕ ಎಸ್ಐಟಿಯಲ್ಲಿ ದಾಖಲಾಗಿರುವ ಇನ್ನೂ 3 ಪ್ರಕರಣಗಳಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲು ಎಸ್ಐಟಿ ಮುಂದಾಗಿದೆ.



ಸೋತು ಕಳೆಗುಂದಿದ ಪ್ರಜ್ವಲ್
ಲೋಕಸಭಾ ಚುನಾವಣೆಯಲ್ಲಿ ಹಾಸನದಿಂದ ಪ್ರಜ್ವಲ್ ರೇವಣ್ಣ ಸೋತ ಸುದ್ದಿ ಎಸ್ಐಟಿ ಅಧಿಕಾರಿಗಳು ತಿಳಿಸುತ್ತಿದ್ದಂತೆ ಅವರು ಸಪ್ಪೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಅವರ ಮುಖ ಕಳೆಗುಂದಿದ್ದು, ಹತಾಶೆಗೊಳಗಾಗಿದ್ದಾರೆ ಎನ್ನಲಾಗಿದೆ. ಪ್ರಜ್ವಲ್ ರೇವಣ್ಣ ಪುರುಷತ್ವ ಪರೀಕ್ಷೆಗೆ ಕೋರ್ಟ್ ಒಪ್ಪಿಗೆ ನೀಡಿದ ಬೆನ್ನಲ್ಲೇ ಅವರನ್ನು ಬುಧವಾರ ಬೌರಿಂಗ್ ಆಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆಗೆ ಒಳಪಡಿಸಲಾಗಿತ್ತು.


