Published
2 years agoon
By
Akkare News
ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ವಿರುದ್ಧ ದಾಖಲಾಗಿದ್ದ ಅಪಹರಣ ಪ್ರಕರಣದಲ್ಲಿ ರಾಜ್ಯ ಹೈಕೋರ್ಟ್ ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆದರೆ, ಭವಾನಿ ಅವರು ತನಿಖೆಗೆ ಸಹಕರಿಸಬೇಕು, ಹಾಸನ ಅಥವಾ ಮೈಸೂರಿನ ಕೆಆರ್ ನಗರಕ್ಕೆ ಪ್ರವೇಶಿಸದಂತೆ ನ್ಯಾಯಾಲಯವು ಸೂಚನೆ ನೀಡಿದೆ.
ಜೂನ್ 1 ರಂದು, ವಿಶೇಷ ತನಿಖಾ ತಂಡವು (ಎಸ್ಐಟಿ) ಭವಾನಿ ಅವರಿಗೆ ತಮ್ಮ ಮಗನ ವಿರುದ್ಧ ಲೈಂಗಿಕ ಕಿರುಕುಳದ ಆರೋಪಕ್ಕೆ ಸಂಬಂಧಿಸಿದ ಅಪಹರಣ ಪ್ರಕರಣದಲ್ಲಿ ನಿಮ್ಮನ್ನು ಪ್ರಶ್ನಿಸುವ ಅಗತ್ಯವಿದ್ದು, ತಮ್ಮ ಮನೆಗೆ ಅಧಿಕಾರಿಗಳು ಹಾಜರಾಗುತ್ತಾರೆ ಎಂದು ನೋಟಿಸ್ ನೀಡಿತ್ತು.


ಅದೇ ದಿನ ‘ಚೆನ್ನಾಂಬಿಕಾ ನಿಲಯ’ದ ಭವಾನಿ ಅವರ ಮನೆಗೆ ಎಸ್ಐಟಿ ದಳದ ತಂಡವೊಂದು ಆಗಮಿಸಿದಾಗ ಅವರು ಇರಲಿಲ್ಲ. ಮೈಸೂರು, ಹಾಸನ, ಬೆಂಗಳೂರು, ಮಂಡ್ಯ, ರಾಮನಗರ ಸೇರಿದಂತೆ ವಿವಿಧೆಡೆ ಎಸ್ಐಟಿ ಶೋಧ ನಡೆಸಿದೆ. ಭವಾನಿ ಪತ್ತೆಗಾಗಿ ಆಕೆಯ ಸಂಬಂಧಿಕರ ಮನೆಗಳಲ್ಲಿಯೂ ಸಹ ಹುಡುಕಾಟ ನಡೆಸಲಾಯಿತು. ಆದರೆ, ಈ ತಿಂಗಳ ಆರಂಭದಿಂದಲೂ ಅವರು ಪತ್ತೆಯಾಗಲಿಲ್ಲ.






ಹಲವು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಜ್ವಲ್ ಅವರನ್ನು ಬಂಧಿಸಲಾಗಿದೆ. ಇದೇ ಪ್ರಕರಣದಲ್ಲಿ ಭವಾನಿ ಪತಿ ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಕೂಡ ಜಾಮೀನಿನ ಮೇಲೆ ಇದ್ದಾರೆ.
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರ ಶಿಫಾರಸಿನ ಮೇರೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ತನಿಖೆಗಾಗಿ ಕರ್ನಾಟಕ ಸರ್ಕಾರವು ಎಸ್ಐಟಿಯನ್ನು ರಚಿಸಿದ್ದು, ಈ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಪ್ರಜ್ವಲ್ ಶುಕ್ರವಾರ ಜರ್ಮನಿಯಿಂದ ವಾಪಸಾಗಿದ್ದು, ಕೂಡಲೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅವರನ್ನು ಬಂಧಿಸಿದೆ. ನಗರದ ವಿಶೇಷ ನ್ಯಾಯಾಲಯ ಜೂನ್ 6ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.