ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ: ಹರೀಶ್‌ ಕುಮಾರ್

Published

on

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ ಸೋತಿದೆ ಎಂದ ಮಾತ್ರಕ್ಕೆ ರಾಜಿನಾಮೆ ನೀಡೋದಿಲ್ಲ. ರಾಜಿನಾಮೆ ಮಾರ್ಕೆಟ್ ನಲ್ಲಿ ಸಿಗುವ ವಸ್ತು ಅಲ್ಲ. ಪಕ್ಷದ ಜಿಲ್ಲಾ ಮುಖಂಡರು, ಚುನಾವಣೆಗೆ ಸ್ಪರ್ಧಿಸಿದವರು, ಜವಾಬ್ದಾರಿಯುತ ವ್ಯಕ್ತಿಗಳು ರಾಜಿನಾಮೆ ಕೇಳಿದರೆ ಪರಿಶೀಲನೆ ನಡೆಸಬಹುದು. ಆದರೆ, ವಾಟ್ಸ್ ಆಪ್ ಯುನಿವರ್ಸಿಟಿಯಲ್ಲಿ ಕೆಲವರು ರಾಜಿನಾಮೆ ಕೊಡಿ ಎಂದ ಕೂಡಲೇ ಆಗ ರಾಜಿನಾಮೆ ನೀಡಲಾಗುವುದಿಲ್ಲ, ನಾನು ವಾಟ್ಸಪ್‌ ವಿವಿ ಸ್ಟೂಡೆಂಟ್‌ ಅಲ್ಲ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ, ವಿಧಾನಪರಿಷತ್‌ ಸದಸ್ಯ ಹರೀಶ್‌ ಕುಮಾರ್‌ ಹೇಳಿದರು.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮನೆಯಲ್ಲಿ ಕೂತವನನ್ನು ಪಕ್ಷ ಜಿಲ್ಲಾಧ್ಯಕ್ಷ ಮಾಡಿಲ್ಲ. ಜಿಲ್ಲೆಯ ಹಲವಾರು ಜವಾಬ್ದಾರಿಗಳನ್ನು ಈ ಹಿಂದೆ ನಾನು ನಿಭಾಯಿಸಿದ್ದೇನೆ. ಅದರ ಆಧಾರದಲ್ಲಿ ಜಿಲ್ಲಾಧ್ಯಕ್ಷ ಸ್ಥಾನ ನನಗೆ ನೀಡಿದ್ದಾರೆ. 1989ರಲ್ಲಿ ಚುನಾವಣೆ ಸಂದರ್ಭ ಕೊನೆಯ ಕ್ಷಣದಲ್ಲಿ ಬಿ.ಫಾರಂ ತಪ್ಪಿದಾಗ ಪಕ್ಷ ಬಿಟ್ಟಿಲ್ಲ. ಅಭ್ಯರ್ಥಿ ಗೆಲುವಿಗಾಗಿ ಕೆಲಸ ಮಾಡಿದ್ದೆ. ಗೆದ್ದರೆ ನನ್ನ ಗೆಲವು ಎಂದು ಹೇಳುತ್ತಾರೆ. ಸೋತರೆ ಬೇರೆಯವರ ಮೇಲೆ ಬೆರಳು ತೋರಿಸುತ್ತಾರೆ. ರಾಜಿನಾಮೆ ನೀಡಬೇಕು ಎಂದು ಪಕ್ಷ ಹೇಳಿದರೆ ಅಗ ರಾಜಿನಾಮೆ ನೀಡಿ ಪಕ್ಷ ಸದೃಢಗೊಳಿಸಲು ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದರು

 

ಈ ಬಾರಿಯ ಲೋಕಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆಯನ್ನು ಪದ್ಮರಾಜ್‌ ಅವರು ಹೊರುತ್ತೇನೆ ಎಂದಿದ್ದಾರೆ. ಸೋಲಿಗೆ ಅವರೊಬ್ಬರೇ ಜವಾಬ್ದಾರಿಯಲ್ಲ. ಎಲ್ಲರೂ ಒಗ್ಗಟ್ಟಾಗಿ ಕೆಲಸ ನಿರ್ವಹಿಸಿದ್ದೆವು. ಕಳೆದ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಈ ಬಾರಿ ನಮ್ಮ ಅಭ್ಯರ್ಥಿಗೆ ಅಧಿಕ ಮತ ದೊರಕಿದೆ. ಆದರೂ ಸೋಲು-ಸೋಲೇ. ಪಕ್ಷವನ್ನು ಮತ್ತಷ್ಟು ಸದೃಢಗೊಳಿಸುತ್ತೇವೆ ಎಂದು ತಿಳಿಸಿದರು.

Continue Reading
Click to comment

Leave a Reply

Your email address will not be published. Required fields are marked *

Advertisement