ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಉಡುಪಿ

ಕಾಪು: ಬೀಚ್ ಬಳಿ ಬೈಕ್ ಇಟ್ಟು ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

Published

on

ಕಾಪು: ಕಾಪು ಬೀಚ್‌ ಬಳಿ ಬೈಕ್‌ ಹಾಗೂ ಪರ್ಸ್ ಬಿಟ್ಟು ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪಡುಕರೆ ಸಮುದ್ರದಲ್ಲಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ.
 
ಮೃತ ಯುವಕ ಕಾಪು ಪಡು ಗ್ರಾಮ ನಿವಾಸಿ ಕರಣ್‌ ಸಾಲ್ಯಾನ್‌ (20) ಎಂದು ತಿಳಿದು ಬಂದಿದೆ.

 

 

ಕರಣ್‌ ಸಾಲ್ಯಾನ್‌ ಅವರು ಜೂ. 5ರಂದು ಅಪರಾಹ್ನ 3 ಗಂಟೆಗೆ ಪೇಟೆಗೆ ಹೋಗಿ ಬರುವುದಾಗಿ ತಿಳಿಸಿ ಮನೆಯಿಂದ ಹೋಗಿದ್ದು, ಬಳಿಕ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ. 
 
ಮನೆಯಿಂದ ನಾಪತ್ತೆಯಾಗಿದ್ದ ಆತನ ಬೈಕ್‌, ಬೆಲೆಬಾಳುವ ಐಫೋನ್‌, ನಗದು ಸಹಿತವಾಗಿ ಪರ್ಸ್‌ ಕಾಪು ಬೀಚ್‌ ಬಳಿ ಪತ್ತೆಯಾಗಿತ್ತು. 

ಆ ಬಳಿಕ ಮನೆಯವರು ಮತ್ತು ಸ್ಥಳೀಯರು ಕಾಪು ಬೀಚ್‌ ಬಳಿ, ಸಮುದ್ರದಲ್ಲಿ ತೀವ್ರ ಹುಡುಕಾಟ ನಡೆಸಿದ್ದರು ಎಂದು ತಿಳಿದು ಬಂದಿದೆ.
 
ಮಗ ನಾಪತ್ತೆಯಾಗಿರುವ ಬಗ್ಗೆ ನಾರಾಯಣ್‌ ಸಾಲ್ಯಾನ್‌ ಯಾನೆ ತುಳಸಿ ಅವರು ಕಾಪು ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪೊಲೀಸರು ಕೂಡಾ ತನಿಖೆ ಮುಂದುವರಿಸಿದ್ದರು.

 

 

ಈ ಮಧ್ಯೆ ಶುಕ್ರವಾರ ಮಧ್ಯಾಹ್ನ ಪಡುಕೆರೆ ಸಮುದ್ರದಲ್ಲಿ ಮೃತದೇಹವೊಂದು ತೇಲಿಕೊಂಡು ಬರುತ್ತಿರುವುದನ್ನು ಗಮನಿಸಿದ್ದ ಸ್ಥಳೀಯರು ಮೃತದೇಹವನ್ನು ಬದಿಗೆ ತಂದು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದರು. 
 
ಪೊಲೀಸರು ನಾಪತ್ತೆಯಾಗಿದ್ದ ಕರಣ್‌ನ ಮನೆಯವರಿಗೆ ಮಾಹಿತಿ ತಲುಪಿಸಿದ್ದು, ಅವರು ಸ್ಥಳಕ್ಕೆ ಹೋಗಿ ನೋಡಿ, ಮೃತದೇಹದ ಗುರುತು ಪತ್ತೆ ಹಚ್ಚಿದರು. 
 
ಬಳಿಕ ಕಾಪು ಸೂರಿ ಶೆಟ್ಟಿ ನೇತೃತ್ವದಲ್ಲಿ ಮೃತದೇಹವನ್ನು ಉಡುಪಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು ಎಂದು ತಿಳಿದು ಬಂದಿದೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement