ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಷ್ಟ್ರೀಯ

ಅಯೋಧ್ಯೆ ರಾಮ ಮಂದಿರದಲ್ಲಿ ಗುಂಡಿಗೆ ಯೋಧನ ಜೀವಾಂತ್ಯ..!

Published

on

ಅಯೋಧ್ಯಾ : ಅಯೋಧ್ಯೆಯ ರಾಮ ಮಂದಿರದ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್‌ಎಸ್‌ಎಫ್‌ ಯೋಧ ಅನುಮಾನಾಸ್ಪದವಾಗಿ ಗುಂಡು ತಾಗಿ ಸಾ*ವನ್ನಪ್ಪಿದ್ದಾರೆ. ಜೂನ್ 19 ರ ಮುಂಜಾನೆ 5.25 ಕ್ಕೆ ಈ ಘಟನೆ ನಡೆದಿದ್ದು, ಯೋಧನ ಹಣೆಗೆ ಗುಂಡು ತಾಗಿ ಮಂದಿರದ ವಿಐಪಿ ಗೇಟ್ ಬಳಿ ಮೃ*ತಪಟ್ಟಿದ್ದಾನೆ. ಮೃ*ತ ಯೋಧನನ್ನು ಶತ್ರುಘ್ನ ವಿಶ್ವಕರ್ಮ ಎಂದು ಗುರುತಿಸಲಾಗಿದ್ದು, ಘಟನೆ ಹೇಗಾಯ್ತು ಅನ್ನೋದು ಇನ್ನೂ ನಿಗೂಢವಾಗಿ ಉಳಿದಿದೆ.

 

ಮೂಲಗಳ ಪ್ರಕಾರ, ರಾಮಮಂದಿರ ಸಂಕೀರ್ಣದ ವಿಐಪಿ ಗೇಟ್ ಬಳಿ ಗುಂಡಿನ ಸದ್ದು ಕೇಳಿ ಬಂದಿದೆ. ಸಹೋದ್ಯೋಗಿ ಭದ್ರತಾ ಸಿಬ್ಬಂದಿ ಓಡಿ ಬಂದು ನೋಡಿದಾಗ ಶತ್ರುಘ್ನ ವಿಶ್ವಕರ್ಮ ಹಣೆಗೆ ಗುಂಡು ತಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ರವಾನಿಸಲಾಯಿತಾದ್ರೂ ಆ ವೇಳೆಗೆ ಅವರು ಮೃ*ತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಇವರು ಅಂಬೇಡ್ಕರ್ ನಗರದ ನಿವಾಸಿಯಾಗಿದ್ದು, ಘಟನಾ ಸ್ಥಳಕ್ಕೆ ಐಜಿ ಹಾಗೂ ಎಸ್‌ಎಸ್‌ಪಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

 

ಘಟನೆ ವೇಳೆ ಶತ್ರುಘ್ನ ವಿಶ್ವಕರ್ಮ ಮೊಬೈಲ್ ನೋಡುತ್ತಿದ್ದು, ಅವರ ಜೊತೆ ಬೇರೆ ಸಿಬ್ಬಂದಿ ಇದ್ದರು ಎಂದು ಮೊದಲ ಮಾಹಿತಿ ದೊರೆತಿದೆ. ಆದ್ರೆ, ಗುಂಡು ಹಣೆಗೆ ಹೇಗೆ ತಾಗಿತು ಅನ್ನೋ ಬಗ್ಗೆ ಯಾರಿಂದಲೂ ಸರಿಯಾದ ಉತ್ತರ ಸಿಕ್ಕಿಲ್ಲ. ಈ ಬಗ್ಗೆ ಯೋಧ ಶತ್ರುಘ್ನ ವಿಶ್ವಕರ್ಮ ಅವರ ಸಹೋದರರು ಆರೋಪಿಸಿದ್ದಾರೆ. ಸಹೋದರನ ಸಾ*ವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಅವರು ತನಿಖೆಗೆ ಆಗ್ರಹಿಸಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement