ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕ್ರೀಡೆ

ಅಸ್ಟ್ರೇಲಿಯಾದಲ್ಲಿ ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್‌ಶಿಪ್.ಪುತ್ತೂರು ಅಕ್ಷೆಟಿಕ್ ಕ್ಲಬ್‌ನ ನಾಲ್ವರು ಈಜುಪಟುಗಳು ಆಯ್ಕೆ:

Published

on

ಪುತ್ತೂರು: ಆಸ್ಟ್ರೇಲಿಯಾದ ಕ್ಲೀನ್ ಬ್ಯಾಂಡ್ ನಲ್ಲಿ ಆಗಸ್ಟ್‌ನಲ್ಲಿ ನಡೆಯಲಿರುವ ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್ ಶಿಪ್‌ನಲ್ಲಿ ಪ್ರತ್ತೂರು ಅಥ್ಲೆಟಿಕ್ ಕ್ಲಬ್‌ ಈಜುಪಟುಗಳಾದ ಸ್ವೀಕೃತ್ ಆನಂದ್, ಅನ್ವಿತ್ ರೈ ಬಾರಿಕೆ, ದಿಗಂತ್ ವಿ.ಎಸ್. ಹಾಗೂ ಧನ್ವಿತ್‌ ರವರು ಭಾರತ ದೇಶದ ತಂಡವನ್ನು ಪ್ರತಿನಿಧಿಸಲಿದ್ದಾರೆ.

 

ವಿಶಾಖಪಟ್ಟಣದಲ್ಲಿ ರಾಷ್ಟ್ರೀಯ ಲೈಫ್ ಸೇವಿಂಗ್ ಸೊಸೈಟಿಯ(ಆ‌ಲ್ 19ರ ತನಕ ನಡೆದ ಭಾರತ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಇವರು ಭಾಗವಹಿಸಿ ಭಾರತದ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಪುತ್ತೂರಿನ ಈಜು ಪಟುಗಳಾದ – ಸ್ವೀಕೃತ್ ಆನಂದ್ ಬೊಳುವಾರಿನ ಆಸ್ಟರ್‌ ಆನಂದ್ ಮತ್ತು ಸೆನೋರಿಟಾ ಆನಂದ್ ದಂಪತಿ ಪುತ್ರ ಅನ್ವಿತ್ ರೈ ಬಾರಿಕೆಯವರು ದರ್ಬೆ ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು ಪರ್ಪುಣ ಬಾರಿಕೆ ಅನಿಲ್ ಕುಮಾರ್ ರೈ ಮತ್ತು ದಿವ್ಯಾ ಅನಿಲ್ ರೈ ದಂಪತಿ ಪುತ್ರ ದಿಗಂತ್ ವಿ.ಎಸ್‌ರವರು ದರ್ಬೆ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು ಎಸ್ ಸಿಡಿಸಿಸಿ ಬ್ಯಾಂಕ್ ಕುಂಬ್ರ ಶಾಖಾ ವ್ಯವಸ್ಥಾಪಕ ಕೂರ್ನಡ್ಕದ ವಿಶ್ವನಾಥ ಎಸ್ ಮತ್ತು ಪುತ್ತೂರು ಕ್ಯಾಂಪ್ರೋ ಚಾಕಲೇಟ್ ಫ್ಯಾಕ್ಟರಿಯ ಹಿರಿಯ ವ್ಯವಸ್ಥಾಪಕಿ ವೀಣಾ ಕುಮಾರಿ ಕೆ ದಂಪತಿ ಪುತ್ರ ಧನ್ಸಿತ್ ರವರು ಅಂಬಿಕಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು ಕೆಮ್ಮಿಂಜೆ ಪ್ರಗತಿ ಬಡಾವಣೆಯ ನಿವಾಸಿ, ಎಸ್ ಸಿಡಿಸಿಸಿ ಬ್ಯಾಂಕ್ ದರ್ಬೆ ಶಾಖಾ ವ್ಯವಸ್ಥಾಪಕ ಕೇಣವ ಕುಮಾ‌ರ್ ಮತ್ತು ಎಸ್‌ ಸಿಡಿಸಿಸಿ ಬ್ಯಾಂಕ್ ಕಲ್ಲಡ್ಕ ಶಾಖಾ ವ್ಯವಸ್ಥಾಪಕಿ ಮೀನಾಕ್ಷಿ ದಂಪತಿ ಪುತ್ರ.

 

 

ಮಂಗಳೂರಿನ ಆಲೋಷಿಯಸ್ ಈಜುಕೊಳ ಹಾಗೂ ಪರ್ಲಡ್ಕ ಬಾಲವನದ ಈಜುಕೊಳದಲ್ಲಿ ಪುತ್ತೂರು ಅಥ್ಲೆಟಿಕ್ ಕ್ಲಬ್‌ನ ಹಿರಿಯ ತರಬೇತುದಾರರಾಗಿರುವ ಪಾರ್ಥ ವಾರಣಾಸಿ, ನಿರೂಪ್ ಜಿ.ಆರ್. ರೋಹಿತ್ ಪಿ. ಹಾಗೂ ದೀಕ್ಷಿತ್‌ ರವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement