ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಕಟೀಲು ದೇವರಿಗೆ ಸ್ವರ್ಣಪಾದುಕೆ ಸಮರ್ಪಣೆ:

Published

on

ಶೃಂಗೇರಿ ಶ್ರೀಗಳ ಸನ್ಯಾಸ ಸ್ವೀಕಾರ ಸುವರ್ಣ ಮಹೋತ್ಸವ ಸ್ಮರಣಾರ್ಥ

ಕಟೀಲು: ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ 36ನೆಯ ಅಧಿಪತಿಗಳಾದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಸನ್ಯಾಸ ಸ್ವೀಕಾರ ಸುವರ್ಣ ಮಹೋತ್ಸವ (1974-2024)ದ ಸಂಸ್ಮರಣಾರ್ಥ ಶ್ರೀಕ್ಷೇತ್ರ ಕಟೀಲು ಶ್ರೀ ದುರ್ಗಾಪರಮೇಶ್ವರೀ ಅಮ್ಮನವರಿಗೆ ಶೃಂಗೇರಿ ಶಾರದಾ ಪೀಠದ ವತಿಯಿಂದ 40 ಲಕ್ಷ ರೂ. ಮೌಲ್ಯದ ಸ್ವರ್ಣಪಾದುಕೆ ಹಾಗೂ ಒಡ್ಯಾಣವನ್ನು ಸಮರ್ಪಿಸಲಾಯಿತು.

 

ಶೃಂಗೇರಿಯಲ್ಲಿ ಉಭಯ ಜಗದ್ಗುರುಗಳು ಈ ಪಾದುಕೆ ಹಾಗೂ ಒಡ್ಯಾಣವನ್ನು ಕಟೀಲು ದೇಗುಲದ ಆನುವಂಶಿಕ ಅರ್ಚಕರಾದ ಹರಿನಾರಾಯಣದಾಸ ಆಸ್ರಣ್ಣರಿಗೆ ಹಸ್ತಾಂತರಿಸಿದರು. ಈ ಪಾದುಕೆ ಮತ್ತು ಒಡ್ಯಾಣವನ್ನು ಬುಧವಾರ ಶ್ರೀದೇವಿಗೆ ತೊಡಿಸಿ ಅಲಂಕಾರ ಮಾಡಲಾಯಿತು. ಶೃಂಗೇರಿ ಶ್ರೀ ಮಠದ ಶಿಷ್ಯರಾದ ಆಂಧ್ರಪ್ರದೇಶದ ಪೋಲಿಸೆಟ್ಟಿ ಶ್ಯಾಮ್‌ ಸುಂದರ್‌ ಅವರು ಇದನ್ನು ಸೇವೆಯಾಗಿ ನೀಡಿದ್ದರು.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement