Published
2 years agoon
By
Akkare News
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ ಅವರ ಜವಾಬ್ದಾರಿ ನಿರ್ವಹಣಾ ಉಸ್ತುವಾರಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್ ಅವರನ್ನು ನೇಮಕ ಮಾಡಲಾಗಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಢಾರಿ ಅವರ ಶಿಪಾರಸ್ಸಿನ ಮೇರೆಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ನೇಮಕ ಮಾಡಿರುತ್ತಾರೆ.
ದಕ್ಷಿಣ ಕನ್ನಡ , ಉಡುಪಿ, ಶಿವಮೊಗ್ಗ ಉತ್ತರ ಕನ್ನಡ , ಚಿಕ್ಕಮಗಳೂರು ಈ ಐದು ಜಿಲ್ಲೆಗಳ ಜವಾಬ್ದಾರಿ ನಿರ್ವಹಣಾ ಉಸ್ತುವಾರಿಯಾಗಿ ಎಂ.ಎಸ್ ಮಹಮ್ಮದ್ ಕಾರ್ಯ ನಿರ್ವಹಿಸಲಿದ್ದಾರೆ.