Published
2 years agoon
By
Akkare News
ಪುತ್ತೂರು: ಪುತ್ತೂರಿನಿಂದ ಕುಂಬ್ರಕ್ಕೆ ಸಿಟಿ ಬಸ್ ವ್ಯವಸ್ಥೆ ಜೂ. 28 ರಿಂದ ಆರಂಭಗೊಳ್ಳಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಬೆಳಿಗ್ಗೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ತೆರಳುವಲ್ಲಿ ಬಸ್ ಸಮಸ್ಯೆಯಾಗುತ್ತಿದ್ದು ಕುಂಬ್ರಕ್ಕೆ ಸಿಟಿ ಬಸ್ ವ್ಯವಸ್ಥೆ ಮಾಡಿದರೆ ಪುತ್ತೂರು ನಗರದ ಆಸುಪಾಸಿನ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ.




ವಿದ್ಯಾರ್ಥಿಗಳ ಸಂಕಷ್ಟವನ್ನು ಅರಿತ ಶಾಸಕರು ಕುಂಬ್ರಕ್ಕೆ ಸಿಟಿ ಬಸ್ ವ್ಯವಸ್ಥೆ ಮಾಡಿದ್ದು ಇದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆ ಮತ್ತು ಜೂ.28 ರಂದು ಕುಂಬ್ರದಲ್ಲಿ ಸಿಟಿ ಬಸ್ ಸ್ವಾಗತ ಕಾರ್ಯಕ್ರಮ ನಡೆಯಲಿದೆ ಎಂದು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಪೂಜಾರಿ ಬೊಳ್ಳಾಡಿ ತಿಳಿಸಿದ್ದಾರೆ.




