ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಆರೋಗ್ಯ

ಕಡಬ, ಪುತ್ತೂರು ತಾಲೂಕಿನಲ್ಲಿ 177 ಡೆಂಗ್ಯೂ ಪ್ರಕರಣಗಳು ಪತ್ತೆ: ಆರೋಗ್ಯಾಧಿಕಾರಿ ಡಾ. ದೀಪಕ್ ರೈ

Published

on

 

ಪುತ್ತೂರು : ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಸುಮಾರು 177 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ. ಈ ಪೈಕಿ ಸುಮಾರು 76 ಪ್ರಕರಣಗಳು ಜೂನ್ ತಿಂಗಳಲ್ಲಿ ಕಾಣಿಸಿಕೊಂಡಿದ್ದು, ಎಲ್ಲಾ 177 ಪ್ರಕರಣದಲ್ಲಿಯೂ ರೋಗಿಗಳು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಪುತ್ತೂರು ಮತ್ತು ಕಡಬ ತಾಲೂಕು ಆರೋಗ್ಯಾಧಿ ಕಾರಿ ಡಾ.ದೀಪಕ್ ರೈ ತಿಳಿಸಿದ್ದಾರೆ.

ಕರಾವಳಿ ಭಾಗದಲ್ಲಿ ಬಿಟ್ಟು ಬಿಟ್ಟು ಸುರಿಯುವ ಮಳೆಯಿಂದಾಗಿ ಹೆಚ್ಚಾಗಿ ಡೆಂಗ್ಯೂ ಸಂಬಂಧಿತ ಜ್ವರಗಳ ಕಾಣಿಸಿಕೊಳ್ಳು ತ್ತವೆ. ಇದೀಗ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಕಾಣಿಸಿಕೊಂಡಿರುವ ಡೆಂಗ್ಯೂ ಪ್ರಕರಣಗಳಲ್ಲಿ ಎಲ್ಲಾ ರೋಗಿಗಳು ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನ ಪಡೆದುಕೊಳ್ಳುತ್ತಿದ್ದಾರೆ. ಆದ್ರೆ ಆಧಾರ್ ಕಾರ್ಡ್‍ನಲ್ಲಿರುವ ವಿಳಾಸದ ಪ್ರಕಾರ ಅವರು ಪುತ್ತೂರು ಮತ್ತು ಕಡಬ ತಾಲೂಕಿಗೆ ಒಳಪಟ್ಟವರಾಗಿದ್ದಾರೆ. ಹಾಗಾಗಿ ಈ ಡೆಂಗ್ಯೂ ಪ್ರಕರಣ ಪುತ್ತೂರು ಮತ್ತು ಕಡಬ ವ್ಯಾಪ್ತಿಗೆ ಒಳಪಡುತ್ತವೆ.

ಈಗಾಗಲೇ ಕಡಬ ಮತ್ತು ಪುತ್ತೂರು ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಇದರಲ್ಲಿ ಹೆಚ್ಚಾಗಿ ಬೆಂಗಳೂರಿನಲ್ಲಿ ಡೆಂಗ್ಯೂ ಪಾಸಿಟಿವ್ ಕಾಣಿಸಿಕೊಂಡ ರೋಗಿಗಳು ಬಂದು ಇಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನಿಂದ ಬಂದಂತಹ ಡೆಂಗ್ಯೂ ರೋಗಿಗಳ ತೀವ್ರತೆ ಹೆಚ್ಚಾಗಿದೆ. ಆದ್ರೆ ಊರಿನ ಕೆಲವು ಡೆಂಗ್ಯೂ ಪ್ರಕರಣದ ರೋಗಿಗಳ ತೀವ್ರತೆ ತುಂಬಾನೇ ಕಡಿಮೆ ಇದೆ. ಇವೆರಡರ ವ್ಯತ್ಯಾಸ ಅಂದ್ರೆ ನಮ್ಮಲ್ಲಿ ಡೆಂಗ್ಯೂ ರೋಗದ ತೀವ್ರತೆ ಕಡಿಮೆ ಇದ್ದು, ಬೆಂಗಳೂರಿನಿಂದ ಪಾಸಿಟಿವ್ ಆಗಿ ಇಲ್ಲಿಗೆ ಬಂದು ಆಸ್ಪತ್ರೆಗೆ ದಾಖಲು ಆದವರಲ್ಲಿ ತೀವ್ರತೆ ಹೆಚ್ಚಾಗಿದೆ. ಆದರೆ ಈ ತನಕ ಯಾವುದೇ ಡೆಂಗ್ಯೂ ಸಾವಿನ ಪ್ರಕರಣ ವರದಿಯಾಗಿಲ್ಲ.

ಪುತ್ತೂರು ತಾಲೂಕಿನಲ್ಲಿ ಖಚಿತವಾದ 7 ಡೆಂಗ್ಯೂ ಪ್ರಕರಣಗಳು ಇವೆ. ಉಳಿದಂತೆ ವೈರಲ್ ಫೀವರ್ ಗೆ ಸಂಬಂಧ ಪಟ್ಟದ್ದಾಗಿವೆ. ಸದ್ಯ ಜ್ವರಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನ ರೋಗಿಯ ರಕ್ತದ ಮಾದರಿಯನ್ನ ತೆಗೆದು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಅಲ್ಲಿ ಖಚಿತವಾದ ನಂತರ ಡೆಂಗ್ಯೂಗೆ ಸಂಬಂಧಿಸಿದ ಚಿಕಿತ್ಸೆಯನ್ನ ನೀಡಲಾಗುತ್ತದೆ. ಸದ್ಯ ಪುತ್ತೂರಿನ ನಗರ ಪ್ರದೇಶಗಳಲ್ಲಿ ಅತೀ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆಯಾಗುತ್ತಿವೆ. ನಗರ ಪ್ರದೇಶಗಳಲ್ಲಿ ಅನೇಕ ಕಡೆ ಕಟ್ಟಡ ಕಾಮಗಾರಿ, ರಸ್ತೆಯ ಚರಂಡಿ ಕಾಮಗಾರಿ ಹೀಗೆ ಹಲವಾರು ಕೆಲಸ ಕಾರ್ಯಗಳು ನಡೀತಾ ಇವೆ. ಹೀಗಿರುವಾಗ ಕಟ್ಟಡ, ರಸ್ತೆ ಕಾಮಗಾರಿಯ ಕೆಲವು ಸ್ಲ್ಯಾಬ್ ಗಳಲ್ಲಿ ನೀರು ಶೇಖರಣೆಯಾಗುತ್ತದೆ.

 

ಇದರಿಂದಾಗಿ ಅದರಲ್ಲಿ ಡೆಂಗ್ಯೂ ಸೊಳ್ಳೆಗಳು ಉತ್ಪತ್ತಿಯಾಗಿ ಮನುಷ್ಯನ ಮೇಲೆ ಪ್ರಭಾವ ಬೀರುತ್ತಿವೆ. ಉಪ್ಪಿನಂಗಡಿ ನಗರ ಭಾಗಗಳಲ್ಲೂ 35 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಹಾಗಾಗಿ ಜನರು ಆದಷ್ಟು ಮನೆ ಪಕ್ಕ ನೀರು ಶೇಖರಣೆಯಾಗದಂತೆ ನೋಡಿ ಕೊಳ್ಳಬೇಕು. ಇದಕ್ಕಾಗಿ ಈಗಾಗ್ಲೇ ನಾವು ಬೇರೆ ಬೇರೆ ಅಧಿಕಾರಿಗಳನ್ನು ನೇಮಿಸಿ ಮಾಹಿತಿ ನೀಡುವ ಕೆಲಸ ಆರಂಭಿಸಿದ್ದೇವೆ. ಈ ಮೂಲಕ ಡೆಂಗ್ಯೂ ಜ್ವರ ನಿಯಂತ್ರಣದ ಬಗ್ಗೆ ಪ್ರಯತ್ನ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement