ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಅಧಿವೇಶನ ಮುಗಿಯುವುದರೊಳಗೆ ಸರ್ಕಾರದಿಂದ ಕಂಬಳಕ್ಕೆ ಅನುದಾನ ಬಿಡುಗಡೆ : ಸಚಿವ ಹೆಚ್‌.ಕೆ. ಪಾಟೀಲ್‌

Published

on

ಬೆಂಗಳೂರು : ಕರಾವಳಿಯ ಹೆಮ್ಮೆಯ ‘ಕಂಬಳ’ಕ್ಕೆ ಅನುದಾನ ಸಿಗಬೇಕು ಎಂಬ ಆಗ್ರಹ ಕಂಬಳ ಸಮಿತಿಯಿಂದ ಕೇಳಿಬಂದಿತ್ತು. ಇದೀಗ ವಿಧಾನ ಪರಿಷತ್ ಕಲಾಪದಲ್ಲಿ ಕಂಬಳ ಸದ್ದು ಮಾಡಿದೆ. 2024-25ನೇ ಸಾಲಿನಲ್ಲಿ ರಾಜ್ಯದ 5 ಕಡೆ ನಡೆಯಲಿರುವ ಕಂಬಳಕ್ಕೆ ಈ ಅಧಿವೇಶನ ಮುಗಿಯುವುದರೊಳಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುತ್ತೇವೆ ಎಂದು ಸಚಿವ ಹೆಚ್‌.ಕೆ. ಪಾಟೀಲ್‌ ಭರವಸೆ ನೀಡಿದ್ದಾರೆ.

 

ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಕೇಳಿದ ಪ್ರಶ್ನೆಗೆ ಸಚಿವ ಪಾಟೀಲ್ ಭರವಸೆ ನೀಡಿದರು.
ಜಾನಪದ ಕ್ರೀಡೆ ಕಂಬಳ ಸಂಘಟಕರಿಗೆ 2023-24ನೇ ಸಾಲಿನ ಅನುದಾನ ಬಿಡುಗಡೆ ಮಾಡಿಲ್ಲ.

 

ಇದರಿಂದಾಗಿ ಸಂಘಟಕರಿಗೆ ಸಮಸ್ಯೆ ಆಗಿದೆ. ರಾಜ್ಯದ 20 ಕಡೆ ಕಂಬಳ ನಡೆದಿದೆ. ಮಾಜಿ ಸಿಎಂ ಸದಾನಂದ ಗೌಡರು ಮುಖ್ಯಮಂತ್ರಿಗಳಾಗಿದ್ದಾಗ 1 ಕೋಟಿ ರೂ. ಬಿಡುಗಡೆ ಮಾಡಿದ್ದರು. ಈಗಿನ ಸರ್ಕಾರ ಯಾಕೆ ಅನುದಾನ ಬಿಡುಗಡೆ ಮಾಡಿಲ್ಲ? ಲಕ್ಷಾಂತರ ಜನ ಕಂಬಳವನ್ನೇ ನೆಚ್ಚಿಕೊಂಡಿದ್ದಾರೆ. ಬಜೆಟ್‌ನಲ್ಲಿ ಇದಕ್ಕೆ ಹಣ ಮೀಸಲಿಡಬೇಕಿತ್ತು. ಕಳೆದ ವರ್ಷದ ಕಂಬಳದ ಅನುದಾನನ್ನೂ ಏಕೆ ಬಿಡುಗಡೆ ಮಾಡಿಲ್ಲ? ಎಂದು ಪ್ರತಾಪ್ ಸಿಂಹ ನಾಯಕ್ ಪ್ರಶ್ನಿಸಿದ್ದರು.

 

ಇದಕ್ಕೆ ಉತ್ತರಿಸಿದ ಸಚಿವ ಹೆಚ್‌.ಕೆ. ಪಾಟೀಲ್‌, ಕಳೆದ ವರ್ಷದ ಕಂಬಳದ ಅನುದಾನ ಬಿಡುಗಡೆ ಆಗಿಲ್ಲ. 2 ಕಂಬಳಕ್ಕೆ 5 ಮತ್ತು 10 ಲಕ್ಷ ರೂ. ಅನುದಾನ ನೀಡಿದ್ದೇವೆ. ಡಿಸಿ ಅವರು ಬಿಲ್ ತಯಾರಿಸಿ ಮಾರ್ಚ್ 20ರ ಒಳಗೆ ಕಳುಹಿಸಿದ್ದಾರೆ. ಬಿಲ್ ಕಳುಹಿಸುವುದು ತಡವಾದುದರಿಂದ ಅನುದಾನ ಬಿಡುಗಡೆಯಾಗಿಲ್ಲ. ಕೂಡಲೇ ಅನುದಾನ ಬಿಡುಗಡೆ ಮಾಡುತ್ತೇವೆ. ಈ ಅಧಿವೇಶನ ಮುಗಿಯುವುದರೊಳಗೆ ಹಣ ಬಿಡುಗಡೆ ಮಾಡುತ್ತೇವೆ. ಈ ವರ್ಷ ಅಂದರೆ 2024-25ನೇ ಸಾಲಿನಲ್ಲಿ ರಾಜ್ಯದ 5 ಕಡೆ ನಡೆಯುವ ಕಂಬಳಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುತ್ತೇವೆ. ಕ್ರೀಡೆಯೊಳಗೆ ನಾವು ರಾಜಕೀಯ ಮಾಡೋದಿಲ್ಲ ಎಂದು ತಿಳಿಸಿದರು.

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement