Published
2 years agoon
By
Akkare News
ಕಲ್ಲಡ್ಕ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಂಠಿಕ ಕಿರಿಯ ಶಾಲೆಯ ಶಿಥಿಲಾವಸ್ಥೆಯ 3 ಕೊಠಡಿಗಳನ್ನು ಭಾನುವಾರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಲ್ಲಡ್ಕ ವಲಯದ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನದ ಮೂಲಕ ತೆರವು ಮಾಡಿದೆ.

ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ಶಾಲಾ ಮುಖ್ಯ ಶಿಕ್ಷಕಿ ಹಾಗೂ ಎಸ್.ಡಿ.ಎಂ.ಸಿ.ಯವರ ಮನವಿ ಮೇರೆಗೆ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಲ್ಲಡ್ಕ ವಲಯದ ವಿಪತ್ತು ನಿರ್ವಹಣಾ ತಂಡದವರು ಶಿಥಿಲಾವಸ್ಥೆಯಲ್ಲಿರುವ ಕಟ್ಟಡವನ್ನು ತೆರವು ಮಾಡಿದ್ದಾರೆ.



ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಎನ್ ದೂರವಾಣಿ ಮುಖ್ಯೆನ ಸಂಪರ್ಕಿಸಿ ಶೌರ್ಯ ವಿಪತ್ತು ತಂಡದ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿ ಇಲಾಖ ಪರವಾಗಿ ಧನ್ಯವಾದ ಹೇಳಿದರು.

ಆಟಿ ತಿಂಗಳು ಆದ ಕಾರಣ ಕಂಠಿಕ ಪ್ರದೇಶದಲ್ಲಿ ಮನೆ ಮನೆ ಭೇಟಿ ನೀಡುತ್ತಿದ್ದ ಆಟಿ ಕೆಲೆಂಜ ಶ್ರಮದಾನ ನಡೆಯುವ ಸ್ಥಳಕ್ಕೆ ಬಂದು ಆಟಿ ಕೆಲೆಂಜ ಕುಣಿತ ಮಾಡಿ ಶೌರ್ಯ ತಂಡಕ್ಕೆ ಕೆಲಸಕ್ಕೆ ಪ್ರೋತ್ಸಾಹ ಮಾಡಿದರು.

ಗ್ರಾಮಾಭಿವೃದ್ಧಿಯೋಜನೆಯ ತಾಲೂಕು ಯೋಜನಾಧಿಕಾರಿ ರಮೇಶ್, ಹಾಗೂ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ, ಶ್ರಮದಾನದ ಸಂದರ್ಭ ಭೇಟಿ ನೀಡಿ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು.






