Published
10 months agoon
By
Akkare Newsಬೆಳ್ತಂಗಡಿ: ಕೆಜಿಎಫ್ ಸಿನೆಮಾದ ಮೂಲಕ ಮನೆಮಾತಾಗಿರುವ ರಾಕಿಂಗ್ ಸ್ಟಾರ್ ಯಶ್ ಅವರು ಕುಟುಂಬ ಸಮೇತರಾಗಿ ಮಂಗಳವಾರ ಬೆಳ್ತಂಗಡಿ ತಾಲೂಕಿನಲ್ಲಿರುವ ಮಣ್ಣಿನ ಹರಕೆಯಿಂದ ಪ್ರಸಿದ್ಧಿ ಪಡೆದಿರುವ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದರು.
ಸಿನೆಮಾದ ಸಕ್ಸಸ್ ಗಾಗಿ ಈ ಹಿಂದೆ ಭೇಟಿ ನೀಡಿದ್ದ ಅವರು ಪತ್ನಿ ರಾಧಿಕಾ ಪಂಡಿತ್, ಮಕ್ಕಳೊಂದಿಗೆ ಬಂದು ದೇವರಿಗೆ ಕುಟುಂಬ ಹಾಗೂ ಸಿನೆಮಾ ರೀಲ್ ನ ಮಣ್ಣಿನ ಹರಕೆ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಸುರ್ಯ ಗುತ್ತು ಡಾ.ಸತೀಶ್ಚಂದ್ರ ಎಸ್. ಅವರು ದಂಪತಿಗಳನ್ನು ಕ್ಷೇತ್ರದ ವತಿಯಿಂದ ಗೌರವಿಸಿದರು.
ಬಳಿಕ ನೇರವಾಗಿ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆಯಲು ತೆರಳಿದ್ದು, ಅಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವರು. ಅಲ್ಲಿಂದ ನೇರವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಲಿ ವಿಶೇಷ ಪೂಜೆ ಸಲ್ಲಿಸಲಿರುವರು.
ಪತ್ನಿ ರಾಧಿಕಾ ಪಂಡಿತ್. ಮಕ್ಕಳಾದ ಐರಾ ಹಾಗೂ ಯಥರ್ವ್ ಇದ್ದರು. ಟಾಕ್ಸಿಕ್ ಚಲನಚಿತ್ರದ ನಿರ್ಮಾಪಕ ವೆಂಕಟ್ ಜತೆಗಿದ್ದರು.
‘