ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಕಾಡಬೆಟ್ಟು ಒಕ್ಕೂಟದ ವತಿಯಿಂದ ಅಟಿದ ಲೇಸ್ ಕಾರ್ಯಕ್ರಮ

Published

on

ಬಂಟ್ವಾಳ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಕಾಡಬೆಟ್ಟು ಒಕ್ಕೂಟದ ವತಿಯಿಂದ ಅಟಿದ ಲೇಸ್ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾಡಬೆಟ್ಟು ವಗ್ಗ ಇಲ್ಲಿ ಜರಗಿತು.

 

ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ದೀಪ ಬೆಳಗಿಸಿ ಚೆನ್ನೆಮನೆ ಆಟ ಆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ ಹಿಂದಿನ ಕಾಲದ ಜೀವನ ಪದ್ಧತಿಯನ್ನು ಮೆಲುಕು ಹಾಕಿ. ಹಿಂದಿನ ಕಾಲದಲ್ಲಿ ಬಡತನದ ಮೂಲಕ ಸಂತೋಷದಿಂದ ಜೀವನ ಮಾಡುತ್ತಿದ್ದರು, ಆದರೆ ಈಗ ಎಲ್ಲರೂ ಬಡತನದಿಂದ ಹೊರಗಡೆ ಬಂದಿದ್ದಾರೆ ಆದರೆ ಸಂತೋಷದ, ಆರೋಗ್ಯವಂತ ಜೀವನ ಇಲ್ಲ ಎಂದರು.

ಆಟಿ ತಿಂಗಳ ಮಹತ್ವದ ಬಗ್ಗೆ ಉಪನ್ಯಾಸ ನೀಡಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವಗ್ಗ ದ ಅಧ್ಯಕ್ಷರಾದ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು ಮಾತನಾಡಿ ಹಿಂದಿನ ಆಟಿ ತಿಂಗಳಿಗೂ ಇವಾಗಿನ ಆಟಿ ತಿಂಗಳಿಗೂ ಬಹಳ ವ್ಯತ್ಯಾಸವಿದೆ, ಹಿಂದಿನ ಕಾಲದಲ್ಲಿ ನಮ್ಮ ಪೂರ್ವಿಕರು ಪರಿಸರದಲ್ಲಾಗುವ ಅಸಮತೋಲನ ದಿಂದಾಗಿ ಬರುವ ರೋಗರುಜಿನಗಲನ್ನು ತಡೆಗಟ್ಟಲು ಪ್ರಕೃತಿದತ್ತವಾದ ಆಹಾರ ಪದ್ಧತಿಗಳನ್ನು ಅನುಕರಣೆ ಮಾಡುತ್ತಿದ್ದರು.

 

ಆದರೆ ಈಗ ಕಾಲ ಬದಲಾಗಿದೆ ಏನೇ ಆರೋಗ್ಯ ಸಮಸ್ಯೆ ಎದುರಾದರೂ ಆಸ್ಪತ್ರೆ ಭೇಟಿ ನೀಡುವಂತಾಗಿದೆ. ಈ ಮುಖೇನ ಆಟಿಕೂಟಗಳನ್ನು ಮಾಡಿ ಜನರಿಗೆ ನಮ್ಮ ಆಹಾರ ಪದ್ಧತಿಯ ಮನವರಿಕೆ ಮಾಡುವ ಅವಶ್ಯಕತೆ ಇದೆ ಎಂದರು.

ಕಾರ್ಯಕ್ರಮದ ವೇದಿಕೆಯಲ್ಲಿ ಕಾವಳಪಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಲಕ್ಷ್ಮೀನಾರಾಯಣ ಶರ್ಮ, ಕಾಡಬೆಟ್ಟು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಗಜಾನನ ಭಟ್, ಕಾಡಬೆಟ್ಟು ಶಾಲಾ ಮುಖ್ಯ ಶಿಕ್ಷಕಿ ಮೋಹಿನಿ ಕುಮಾರಿ ಯು, ಬಂಟ್ವಾಳ ತಾಲೂಕು ಶೌರ್ಯ ವೀಪತು ನಿರ್ವಹಣಾ ಘಟಕದ ಮಾಸ್ಟರ್ ಪ್ರಕಾಶ್, ಕಾಡಬೆಟ್ಟು ಒಕ್ಕೂಟದ ಮಾಜಿ ಅಧ್ಯಕ್ಷರಾದ ಚಂದಪ್ಪ ಮೂಲ್ಯ, ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಾಡಬೆಟ್ಟು ಒಕ್ಕೂಟದ ಪದಾಧಿಕಾರಿಗಳು, ಪ್ರಗತಿ ಬಂದು ಸ್ವಸಹಾಯ ಸಂಘದ ಸದಸ್ಯರುಗಳು, ಶೌರ್ಯ ವೀಪತು ನಿರ್ವಹಣೆ ಘಟಕ ವಗ್ಗದ ಪ್ರತಿನಿಧಿ ಪ್ರವೀಣ್ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು

 

ರೇಖಾ ಪಿ ಪ್ರಾರ್ಥಿಸಿ,, ಲೀಲಾವತಿ ಸ್ವಾಗತಿಸಿ, ತಾರನಾಥ ಶೆಟ್ಟಿ ವಂದಿಸಿ, ಗಣೇಶ್ ಎಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.


 

Continue Reading
Click to comment

Leave a Reply

Your email address will not be published. Required fields are marked *

Advertisement