Published
2 years agoon
By
Akkare News
ವಿಟ್ಲ : ಆಟೋ ಚಾಲಕನೋರ್ವನಿಗೆ ಯುವಕನೋರ್ವ ಚೂರಿಯಿಂದ ಇರಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಉರಿಮಜಲು ಜಂಕ್ಷನ್ನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇಡ್ಕಿದು ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಘಟನೆ ನಡೆದಿದೆ.
ಆಟೋ ಚಾಲಕ ಶರೀಫ್ ಗಾಯಗೊಂಡವರಾಗಿದ್ದು, ಆತನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಯಡಿ ನಿವಾಸಿ ರಾವೂಫ್ ಎಂಬವರ ಪುತ್ರ ಆಪೀ ಬಂಧಿತ ಆರೋಪಿ.ಘಟನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.