ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ಕಾಫಿ ಸಮಸ್ಯೆ ಪರಿಹಾರಕ್ಕೆ ವಾಣಿಜ್ಯ ಸಚಿವರೊಂದಿಗೆ ಮಾತುಕತೆ…!!!

Published

on

ಶ್ರೀಮಂಗಲ : ಕೊಡಗು -ಮೈಸೂರು ಸಂಸದ ಯದುವೀರ್
ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಮೈಸೂರು ರಾಜಮಾತೆ ಪ್ರಮೋದ ದೇವಿ ಒಡೆಯರ್ ಅವರನ್ನು ಮೈಸೂರಿನಲ್ಲಿ ಸೋಮವಾರ ಕೊಡಗು ಸಂರಕ್ಷಣಾ ವೇದಿಕೆಯ ನಿಯೋಗವು ಭೇಟಿಯಾಗಿ ಸಮಾಲೋಚನೆ ನಡೆಸಿದರು.

 

 

ಮುಖ್ಯವಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಅನುಗುಣವಾಗಿ ಸ್ಥಳೀಯವಾಗಿ ರೋಬಸ್ಟಾ ಕಾಫಿಗೆ ಮಾರುಕಟ್ಟೆ ದರ ವಂಚಿತವಾಗಿರುವ ಬೆಳೆಗಾರರ ಸಮಸ್ಯೆ ಬಗ್ಗೆ ಸಂಸದರಿಗೆ ಮನವರಿಕೆ ಮಾಡಲಾಯಿತು

ಇದರ ಬಗ್ಗೆ ಕೂಲಂಕುಶವಾಗಿ ಚರ್ಚೆ ನಡೆದು ಈ ಬಗ್ಗೆ ಕೇಂದ್ರ ವಾಣಿಜ್ಯ ಸಚಿವರ ಗಮನಕ್ಕೆ ತಂದು, ಸಚಿವರು ಹಾಗೂ ಕೊಡಗು ಸಂರಕ್ಷಣಾ ವೇದಿಕೆಯ ನಿಯೋಗದೊಂದಿಗೆ ಸಭೆ ನಡೆಸಿ ಈ ಸಮಸ್ಯೆಗೆ ಪರಿಹಾರ ಕಂಡು ಕಂಡುಕೊಳ್ಳಲು ನಿರ್ಧರಿಸಲಾಯಿತು.

 

ಭಾರತೀಯ ಕಾಫಿ ಮಂಡಳಿಯೊಂದಿಗೆ ಈ ಬಗ್ಗೆ ಮತ್ತು ಬೆಳೆಗಾರರು ಎದುರಿಸುತ್ತಿರುವ ಇತರ ಸಮಸ್ಯೆಗಳ ಬಗ್ಗೆ ಪರಿಹಾರಕ್ಕಾಗಿ ನೇರ ಮಾತುಕತೆಗೆ ವೇದಿಕೆ ಕಲ್ಪಿಸುವುದಾಗಿ ಈ ಬಗ್ಗೆ ಮುಂದಿನ ತಿಂಗಳು ಬೆಂಗಳೂರಿನಲ್ಲಿ ನಡೆಯುವ ಕಾಫಿ ಸಮ್ಮೇಳನದಲ್ಲಿ ಪ್ರತ್ಯೇಕ ವೇದಿಕೆ ನಿರ್ಮಿಸಿ ಈ ವಿಚಾರದ ಬಗ್ಗೆ ಸಮಾಲೋಚನೆ ನಡೆಸಿ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಭರವಸೆ ನೀಡಿದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version