ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಸೆ12: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹೊಸ್ತಾರೋಗಣೆ

Published

on

ಕಾಣಿಯೂರು: ಇತಿಹಾಸಪ್ರಸಿದ್ಧ |ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹೊಸ್ತಾರೋಗಣೆ ಸೆ 12ರಂದು ನಡೆಯಲಿದೆ. ಪ್ರಾತಃಕಾಲ 5-15ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, 7.30ಕ್ಕೆ ತೆನೆ ತರುವುದು ಹಾಗೂ ಕದಿರು ಪೂಜೆ ನಡೆಯಲಿದೆ. ಬೆಳಿಗ್ಗೆ8 ರ ಬಳಿಕ ದೇವಳದ ನೌಕರರಿಗೆ ಮತ್ತು ಸ್ಥಳೀಯ ಭಕ್ತರಿಗೆ ಕದಿರು ವಿತರಣೆ ನಡೆಯಲಿದೆ.

ದರುಶನದಲ್ಲಿ ವ್ಯತ್ಯಯ: ಹೊಸ್ತಾರೋಗಣೆ ದಿನ ಬೆಳಿಗ್ಗೆ 10ಗಂಟೆಯ ನಂತರ ದೇವರ ದರುಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಅಲ್ಲದೇ ಆಶ್ಲೇಷ ಬಲಿ ಸೇವೆಯು ಬೆಳಿಗ್ಗೆ 9ಗಂಟೆಯ ನಂತರ 2ಪಾಳೆಯಲ್ಲಿ ನಡೆಯಲಿದೆ. ಭಕ್ತಾದಿಗಳು ಸಹಕರಿಸಬೇಕು ಎಂದು ಶ್ರೀ ದೇವಾಲಯದ ಪ್ರಕಟಣೆ ತಿಳಿಸಿದೆ.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement