ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಸ್ವ ಸಹಾಯ ಸಂಘದಿಂದ ಲೋನ್ ಪಡೆದಿದ್ದ ಮಹಿಳೆ ಮನೆಗೆ ಬಾರದೇ ನಾಪತ್ತೆ:ಪ್ರಕರಣ ದಾಖಲಿಸಿಕೊಂಡ ಪೊಲೀಸರು

Published

on

ಉಪ್ಪಿನಂಗಡಿ: ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ್ದ ವಿವಾಹಿತ ಮಹಿಳೆಯೋರ್ವರು ಮನೆಗೆ ಬಾರದೇ ನಾಪತ್ತೆಯಾದ ಘಟನೆ ನೆಲ್ಯಾಡಿ ಗ್ರಾಮದ ಕೂವೆಕೊಪ್ಪ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಕೂವೆಕೊಪ್ಪ ನಿವಾಸಿ , ಮೂವರು ಮಕ್ಕಳ ತಾಯಿ ಭಾರತಿ (35) ನಾಪತ್ತೆಯಾದ ಮಹಿಳೆ. ಈ ಬಗ್ಗೆ ಈಕೆಯ ಪತಿ ನಾಗೇಶ ಎಂಬವರು ದೂರು ನೀಡಿದ್ದಾರೆ.

 

 

ಈಕೆ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಲ್ಲಿ ಮನೆ ರಿಪೇರಿಗೆಂದು 85 ಸಾವಿರ ರೂ. ಸಾಲವನ್ನು ಪಡೆದಿದ್ದು, ಬಳಿಕ ಕಳೆದ ಜು.7ರಂದು ಇವರ ಪತಿ ಕೂಲಿ ಕೆಲಸಕ್ಕೆಂದು ಹೋದ ಬಳಿಕ ಈಕೆ ಮಂಗಳೂರಿಗೆ ಕೂಲಿ ಕೆಲಸಕ್ಕೆಂದು ತೆರಳಿದ್ದಳು. ಆಕೆ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿರಬಹುದೆಂದು ನಾನು ಭಾವಿಸಿದ್ದೆ.

 

ಆದರೆ ಆ ಬಳಿಕ ಆಕೆ ನನಗೆ ಫೋನ್ ಮಾಡುವುದಾಗಲೀ ಅಥವಾ ಬೇರೆ ಯಾರಲ್ಲಿಯೂ ಫೋನ್ ಮಾಡಿ ಮಾತನಾಡುವುದಾಗಲೀ ಮಾಡಿಲ್ಲ.
ಆಕೆ ಸಾಲ ಕಟ್ಟಲು ಸಂಘಕ್ಕೆ ಬರುತ್ತಾಳೆಂದು ಭಾವಿಸಿ ನಾನು ಸುಮ್ಮನಿದ್ದೆ. ಆದರೆ ಆಕೆ ಅಲ್ಲಿಗೂ ಬಂದಿಲ್ಲ. ಈಗ ಅವಳ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಆಕೆ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ ಎಂದು ಸೆ.6ರಂದು ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version