ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಂದು ನ್ಯಾಯಾಲಯದಲ್ಲಿ ಜಯ ಸಿಗಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Published

on

ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆಯಂತೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರಾರ್ಥನೆ ಸಲ್ಲಿಕೆ

 

 

 

 

ಪುತ್ತೂರು: ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಕುರಿತು ಸೆ.12ರಂದು ಹೈಕೋರ್ಟ್‌ನಲ್ಲಿ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ಸಿದ್ಧರಾಮಯ್ಯ ಅವರಿಗೆ ಜಯ ಸಿಗುವಂತೆ ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆಯಂತೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಮಧ್ಯಾಹ್ನ ತೀರ್ಪು ಹೊರ ಬರುವ ಹಿನ್ನೆಲೆಯಲ್ಲಿ ಬೆಳಿಗ್ಗೆ ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ಮಧ್ಯಾಹ್ನ ಮಹಾಪೂಜೆ ನಡೆಯಲಿದೆ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ, ಗಂಗಾಧರ ಶೆಟ್ಟಿ, ಸುದೇಶ್ ಚಿಕ್ಕಪುತ್ತೂರು, ರಂಜಿತ್ ಬಂಗೇರ, ಗಿರಿಧರ ಗೌಡ ಸಂಪ್ಯ, ಪ್ರಹ್ಲಾದ್, ಹರೀಶ್ ಬಂಗೇರ ಪಡ್ಡಾಯೂರು ಈ ಸಂದರ್ಭ ಉಪಸ್ಥಿತರಿದ್ದರು. ಅರ್ಚಕ ಕೃಷ್ಣ ಭಟ್ ಪ್ರಾರ್ಥನೆ ಸಲ್ಲಿಸಿದರು.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version