Published
1 year agoon
By
Akkare News
ಪುತ್ತೂರು: ಪುತ್ತೂರು ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಅವರು ಹೃದಯಾಘಾತದಿಂದನಿಧನರಾಗಿದ್ದು ಇವರ ನಿಧನಕ್ಕೆ ಶಾಸಕ ಅಶೋಕ್ ಕುಮಾರ್ ರೈ ಸಂತಾಪ ವ್ಯಕ್ತಪಡಿಸಿದ್ದಾರೆ.


ಓರ್ವ ಜವಾಬ್ದಾರಿಯುತ, ಪ್ರಾಮಾಣಿಕ ಸಿಬಂದಿಯನ್ನು ಕಳೆದುಕೊಂಡಿದ್ದೇವೆ ಎಂದು ಸಂತಾಪ ವ್ಯಕ್ತಪಡಿಸಿದ ಶಾಸಕರು, ಅಗಲಿದ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.






