Published
1 year agoon
By
Akkare News
ಉಡುಪಿ, ನ.20: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನವೆಂಬರ್ 21 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 8.30 ಕ್ಕೆ ಬೆಂಗಳೂರಿನಿಂದ ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್ ಮೂಲಕ ಹೊರಟು, 10.15 ಕ್ಕೆ ಕೊಲ್ಲೂರಿಗೆ ಆಗಮಿಸಿ, 10.30 ಕ್ಕೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ಮಧ್ಯಾಹ್ನ 1.30 ಕ್ಕೆ ಕೊಲ್ಲೂರಿನಿಂದ ಮುರುಡೇಶ್ವರಕ್ಕೆ ಪ್ರಯಾಣ ಬೆಳೆಸಲಿದ್ದಾರೆ.










