Published
1 year agoon
By
Akkare News
ಪುತ್ತೂರು :ಜ್ಞಾನದೀಪ ವಿದ್ಯಾಸಂಸ್ಥೆ ಬೆಳ್ಳಾರೆ ಇದರ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮದ ಪ್ರಯುಕ್ತ ಆರ್ ಪಿ ಕಲಾ ಸೇವಾ ಟ್ರಸ್ಟ್ ಪಾಂಬಾರು ಇದರ ವತಿಯಿಂದ ಸಂಗೀತ ಹಾಗೂ ಕಲಾ ಕ್ಷೇತ್ರದ ಗಣನೀಯ ಸಾಧನೆಯನ್ನು ಗುರುತಿಸಿ ಕೊಡಮಾಡುವ 2024 ನೇ ಸಾಲಿನ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ನಿರ್ದೇಶಕರು,ಸಾಹಿತಿ, ಗಾಯಕ,ಕಾರ್ಯಕ್ರಮ ನಿರೂಪಕರು ಆಗಿರುವ ಪದ್ಮರಾಜ್ ಬಿ ಸಿ ಚಾರ್ವಾಕ ಅವರು ಆಯ್ಕೆಯಾಗಿದ್ದಾರೆ.
ನ .23ರಂದು ಅನುಗ್ರಹ ಸಭಾಭವನ ದೇವಿ ಹೈಟ್ಸ್ ಬೆಳ್ಳಾರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದ್ಮರಾಜ್ ಬಿ ಸಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು .