Published
1 year agoon
By
Akkare News
ವಿಟ್ಲ : ಜೋಕಾಲಿಯಲ್ಲಿ ಸಿಲುಕಿ ಬಾಲಕಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ.ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ (8) ಜೋಕಾಲಿಗೆ ಬಲಿಯಾದ ಬಾಲಕಿ.
ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆಗೆ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ದುರಂತ ಸಂಭವಿಸಿದೆ.