Published
1 year agoon
By
Akkare News
ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಡಿ.15 ರಂದು ಸಂಜೆ ನಡೆದಿದೆ.
ಆಂಧ್ರಪ್ರದೇಶದಿಂದ ಅಯ್ಯಪ್ಪ ಮೃತಧಾರಿಗಳನ್ನು ಶಬರಿಮಲೆ ಯಾತ್ರೆಗೆ ಕೊಂಡೊಯ್ಯುವ ಖಾಸಗಿ ಬಸ್ಸು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದು, ಬೈಕ್ ಸವಾರ ಕೊಕ್ಕಡದಿಂದ ಕಾಪಿನಬಾಗಿಲಿಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಬೈಕ್ ಸವಾರ ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಮೂಡುಬೈಲು ನಿವಾಸಿ ಮೃತ ಮಾಧವ ಆಚಾರಿ(52) ಎಂದು ಗುರುತಿಸಲಾಗಿದೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಮೃತ ದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.