Published
1 year agoon
By
Akkare News
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿಯಲ್ಲಿ ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆ ಯತ್ನ ಮಾಡಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಮೊಬೈಲ್ ಹಾಗೂ ಟಿವಿ ನೋಡಬೇಡ ಎಂದು ತಾಯಿ ಹೇಳಿದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಳೆನಾಶಕ ಕುಡಿದು ಆತ್ಮಹತ್ಯೆ ಯತ್ನ ಮಾಡಿದ್ದು, ಆಯನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲು ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.