Published
1 year agoon
By
Akkare News

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಶ್ರೀ ಮಂಜುನಾಥ ದರ್ಶನಕ್ಕೆ ಬರುವ ಭಕ್ತರಿಗಾಗಿ ತಿರುಪತಿ ಮಾದರಿಯಲ್ಲಿ ಸುಸಜ್ಜಿತ ಸೌಕರ್ಯಗಳನ್ನೊಳಗೊಂಡ ಆರಾಮದಾಯಕ ಸರತಿ ಸಾಲಿನ ವ್ಯವಸ್ಥೆಯ ನೂತನ ಸಂಕೀರ್ಣ “ಶ್ರೀ ಸಾನಿಧ್ಯ” ವನ್ನು ನಿರ್ಮಿಸಲಾಗಿದೆ.




