Published
1 year agoon
By
Akkare News
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ತನ್ನ ಪತ್ನಿಗೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಗುಂಡು ಹಾರಿಸಿದ ಬಳಿಕ ತಾನೂ ಆ್ಯಸಿಡ್ ಕುಡಿದು ಸಾವಿಗೀಡಾಗಿದ್ದಾನೆ.


ವಿನೋದಾ ಕುಮಾರಿ ಎಂಬುವವರು ಮೃತ ಮಹಿಳೆಯಾಗಿದ್ದು ಪತಿ ರಾಮಚಂದ್ರ ಎಂದು ತಿಳಿದುಬಂದಿದೆ. ರಾಮಚಂದ್ರ ನಿತ್ಯ ಕುಡಿದು ಬಂದು ಪತ್ನಿ ಜೊತೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಈ ವೇಳೆ ಜಗಳ ಬಿಡಿಸಲು ಬಂದ ಮಗ ಪ್ರಶಾಂತ್ ಫೈರಿಂಗ್ ಮಾಡಲು ರಾಮಚಂದ್ರ ಯತ್ನಿಸಿದ್ದಾನೆ.



