Published
3 months agoon
By
Akkare Newsಪುತ್ತೂರು :ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಛ ಭಾರತ್ ಮಿಷನ್, ತಾಲ್ಲೂಕು ಪಂಚಾಯತ್ ಪುತ್ತೂರು, ಗ್ರಾಮ ಪಂಚಾಯತ್ ಪಾಣಾಜೆ,ಗ್ರಾಮದ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಹತ್ತು ದಿನಗಳ ಕಾಲ ಸ್ವಚ್ಛ ಪುತ್ತೂರು ಬೃಹತ್ ಸ್ವಚ್ಚತಾ ಶ್ರಮದಾನ ಕಾರ್ಯಕ್ರಮ ನಡೆಯಲಿದ್ದು,ಇದರ ಸ್ವಚ್ಚತಾ ಅಭಿಯಾನಕ್ಕೆ ಇಂದು ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಸ್ವಚ್ಚತಾ ಅಭಿಯಾನದ ನೊಡಲ್ ಅಧಿಕಾರಿಯಾದ ಶ್ರೀಕಾಂತ್ ಬಿರಾವು ಮಾತನಾಡಿ ಗ್ರಾಮವು ಸ್ವಚ್ಚವಾಗಿರಿಸುವುದು ನಮ್ಮ ಆದ್ಯ ಕರ್ತವ್ಯ ಎಲ್ಲಾ ಗ್ರಾಮಸ್ಥರು ಸ್ವಚ್ಚತಾ ಅಭಿಯಾನಕ್ಕೆ ಕೈ ಜೋಡಿಸಿ ಸಹಕಾರ ನೀಡಬೇಕೆಂದು ಹೇಳಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಥಾನವನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೈಮುನತ್ತುಲ್ ಮೆಹ್ರ ವಹಿಸಿಕೊಂಡಿದ್ದರು ಪಂಚಾಯತ್ ಸದಸ್ಯರಾದ ಶ್ರೀಮತಿ ಸುಲೋಚನ ಶ್ರೀ ಮೋಹನ್ ನಾಯ್ಕ್, ಅಂಗನವಾಡಿ ಕಾರ್ಯಕರ್ತೆಯರು ಸಂಜೀವಿನಿ ಸಂಜೀವಿನಿ ಪದಾಧಿಕಾರಿಗಳು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು