Published
1 year agoon
By
Akkare News
ಪುತ್ತೂರು: ಧರ್ಮಶ್ರೀ ಭಜನಾ ಮಂದಿರ ಅಶ್ವತ್ಥಕಟ್ಟೆ ಕೋಡಿಂಬಾಡಿ ಇದರ ವತಿಯಿಂದ ಜ.4ರಿಂದ ನಡೆಯುವ 18ನೇ ವರ್ಷದ ನಗರ ಭಜನೋತ್ಸವ ಪ್ರಯುಕ್ತ ಫೆ.1ರಂದು ಏಕಾಹ ಭಜನೆ ಮತ್ತು ಅಶ್ವತ್ಥಪೂಜೆ ನಡೆಯಲಿದೆ.
ಜ.4ರಂದು ಬೆಳಿಗ್ಗೆ ಭಜನಾ ಮಂದಿರದಲ್ಲಿ ಮಹಾಗಣಪತಿ ಹೋಮ ನಡೆದು ಸಂಜೆ ಮಂದಿರದಿಂದ ಮನೆ ಮನೆ ಭಜನೆಗೆ ಹೊರಡುವ ಕಾರ್ಯಕ್ರಮ ನಡೆಯಲಿದೆ. ಜ.31ರಂದು ರಾತ್ರಿ ಮನೆ ಮನೆ ಭಜನೆ ಮುಗಿಸಿ ಮಂದಿರಕ್ಕೆ ಆಗಮಿಸುವ ಕಾರ್ಯಕ್ರಮ ನಡೆಯಿತು.
ಫೆ.1ರಂದು ಬೆಳಿಗ್ಗೆ ಏಕಾಹ ಭಜನೆ ಆರಂಭಗೊಳ್ಳಲಿದ್ದು ಮಧ್ಯಾಹ್ನ ಅಶ್ವತ್ಥಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ಮತ್ತು ಫೆ.2ರಂದು ಬೆಳಿಗ್ಗೆ ಏಕಾಹ ಭಜನೆಯ ಮಂಗಳ ನಡೆಯಲಿದೆ ಎಂದು ಗೌರವಾಧ್ಯಕ್ಷ ಚಂದ್ರಹಾಸ ರೈ ಸರೋಳಿ, ಅಧ್ಯಕ್ಷ ಶೇಖರ ಪೂಜಾರಿ ನಿಡ್ಯ, ಕಾರ್ಯದರ್ಶಿ ದಯಾನಂದ ಗೌಡ ಬೋಳಾಜೆ ಮತ್ತು ಅರ್ಚಕ ದೀಪಕ್ ಮಣಿಯಾಣಿ ತಿಳಿಸಿದ್ದಾರೆ.
ರಾತ್ರಿ 47ನೇ ವರ್ಷದ ಸತ್ಯನಾರಾಯಣ ಪೂಜೆ:
ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ ಅಶ್ವತ್ಥಕಟ್ಟೆ ಕೋಡಿಂಬಾಡಿ ಇದರ ವತಿಯಿಂದ ಫೆ.1ರಂದು ಮಧ್ಯಾಹ್ನ ಕೋಡಿಂಬಾಡಿ ಅಶ್ವತ್ಥಕಟ್ಟೆಯಲ್ಲಿ 7ನೇ ವರ್ಷದ ಸಾರ್ವಜನಿಕ ಶ್ರೀ ಅಶ್ವತ್ಥಪೂಜೆ ಹಾಗೂ ಸಂಜೆ 47ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ(ವೃತ) ಪೂಜೆ ಮತ್ತು ವೇದಮೂರ್ತಿ ಶ್ರೀವತ್ಸ ಕೆದಿಲಾಯ ಶಿಬರ ಇವರಿಂದ ಕಥಾ ವಾಚನ, ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಅಧ್ಯಕ್ಷ ಕೇಶವ ಭಂಡಾರಿ ಕೈಪ, ಪ್ರಧಾನ ಕಾರ್ಯದರ್ಶಿ ದೇವಾನಂದ ಕೆ, ಗೌರವಾಧ್ಯಕ್ಷ ವಾರಿಸೇನ ಜೈನ್ ಕೋಡಿಯಾಡಿ ಮತ್ತು ಅರ್ಚಕ ಬಾಲಕೃಷ್ಣ ಐತಾಳ್ ತಿಳಿಸಿದ್ದಾರೆ.