Connect with us

ಇತರ

ವಕ್ಫ್ ತಿದ್ದುಪಡಿ ಮಸೂದೆ | ಮಧ್ಯಪ್ರವೇಶಕ್ಕೆ ನಿತೀಶ್, ಚಂದ್ರಬಾಬು ನಾಯ್ಡುಗೆ ಪತ್ರ ಬರೆದ ಮೆಹಬೂಬಾ ಮುಫ್ತಿ

Published

on

ವಕ್ಫ್ (ತಿದ್ದುಪಡಿ) ಮಸೂದೆಯ ಜಂಟಿ ಸಂಸತ್ ಸಮಿತಿ (ಜೆಸಿಪಿ) ಸಂಸತ್ತಿನಲ್ಲಿ ಮಂಡನೆಯಾಗುವ ಸಾಧ್ಯತೆ ಇರುವುದರಿಂದ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು, ಭಾರತದ ರಾಷ್ಟ್ರೀಯ ಏಕತೆ ಮತ್ತು ಕೋಮು ಸಾಮರಸ್ಯಕ್ಕೆ ಈ ಮಸೂದೆಯಿಂದ ಹಾನಿಯಾಗದಂತೆ ತಡೆಯಲು ಇಬ್ಬರು ಎನ್‌ಡಿಎ ಮಿತ್ರಪಕ್ಷಗಳಾದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ಮಧ್ಯಸ್ಥಿಕೆಯನ್ನು ಕೋರಿದ್ದಾರೆ. 

 

 

ನಿತೀಶ್ ಮತ್ತು ನಾಯ್ಡು ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿರುವ ಅವರು, ಕಳೆದ ದಶಕದಿಂದ ಮುಸ್ಲಿಮರನ್ನು ವ್ಯವಸ್ಥಿತವಾಗಿ ಹಕ್ಕುಗಳಿಂದ ವಂಚಿತಗೊಳಿಸಲಾಗಿದೆ, ಅಧಿಕಾರವನ್ನು ಕಸಿದುಕೊಳ್ಳಲಾಗಿದೆ ಮತ್ತು ರಾಜಕೀಯವಾಗಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ವಂಚಿಸಲಾಗಿರುವ ಈ ಸಮಯದಲ್ಲೆ ಪ್ರಸ್ತಾವಿತ ವಕ್ಫ್ ತಿದ್ದುಪಡಿ ಮಸೂದೆ ಪ್ರಸ್ತಾಪ ಮಾಡಲಾಗಿದೆ ಎಂದು ಮೆಹಬೂಬಾ ಬರೆದಿದ್ದಾರೆ.

 

“ಬಹುಶಃ ಅತ್ಯಂತ ಕಳವಳಕಾರಿ ವಿಷಯವೆಂದರೆ ಜಂಟಿ ಸಂಸದೀಯ ಸಮಿತಿಗೆ ಸಲ್ಲಿಸಲಾದ ಭಿನ್ನಾಭಿಪ್ರಾಯದ ಟಿಪ್ಪಣಿಗಳ ರೂಪದಲ್ಲಿ ವಿರೋಧ ಪಕ್ಷಗಳು ಎತ್ತಿರುವ ಅನುಮಾನಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಈ ಅಸಂವಿಧಾನಿಕ, ಅಸಮಂಜಸ ಮತ್ತು ಸರ್ವಾಧಿಕಾರಿ ಮಸೂದೆಯಿಂದ ಸಂಕಷ್ಟಕ್ಕೀಡಾಗುವ ಸಮುದಾಯವನ್ನು ಸಂಪರ್ಕಿಸಲು ಯಾವುದೇ ನಿಜವಾದ ಪ್ರಯತ್ನಗಳಿಲ್ಲದೆ ಸಮಾಲೋಚನೆ ನಡೆಸುವುದು ಹಾಸ್ಯಾಸ್ಪದವೆಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ.

 

 

ದೇಶಾದ್ಯಂತ ವಕ್ಫ್ ಒಡೆತನದ ಆಸ್ತಿಗಳ ಸುಧಾರಣೆ ಎಂದು ಹೇಳಲಾಗುತ್ತಿರುವ ಇದರ (ಬಿಲ್) ನಿಜವಾದ ಉದ್ದೇಶ ವಕ್ಫ್ ಕಾಯ್ದೆಯ ಅಡಿಪಾಯವನ್ನೇ ಹಾಳು ಮಾಡುವುದಾಗಿದೆ ಎಂದು ಮೆಹಬೊಬಾ ಹೇಳಿದ್ದಾರೆ. ಪ್ರತಿಯೊಂದು ಪ್ರಸ್ತಾವಿತ ತಿದ್ದುಪಡಿಯು ಮುಸ್ಲಿಂ ಸಮುದಾಯದ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ ಮಾತ್ರವಲ್ಲದೆ ನಮ್ಮ ಸಂವಿಧಾನವು ಖಾತರಿಪಡಿಸಿದ ಮೂಲಭೂತ ಹಕ್ಕುಗಳ ಮೇಲೆ ನೇರ ದಾಳಿಯಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

“ಈ ತೀವ್ರ ವಿಭಜಕ ಮಸೂದೆಯು 2014 ರಿಂದ ಮುಸ್ಲಿಮರ ವಿರುದ್ಧದ ಕೋಮುವಾದಕ್ಕೆ ಮತ್ತು ವಂಚನೆಗೆ ಕಾರಣವಾಗಿರುವ ಬಹುಸಂಖ್ಯಾತವಾದದ ಸ್ಪಷ್ಟ ಅಭಿವ್ಯಕ್ತಿಯಾಗಿದೆ. ಇದು ವೈವಿಧ್ಯತೆ, ಬಹುತ್ವ ಮತ್ತು ಶಾಂತಿಯುತ ಸಹಬಾಳ್ವೆಯ ಮೂಲ ಮೌಲ್ಯಗಳ ಮೇಲೆ ಅಭಿವೃದ್ಧಿ ಹೊಂದುತ್ತಿರುವ ಭಾರತದ ಕಲ್ಪನೆಯ ಹೃದಯಭಾಗವನ್ನೇ ಹೊಡೆಯುತ್ತದೆ. ಭಾರತಕ್ಕಾಗಿ ಗಾಂಧಿಯವರ ದೃಷ್ಟಿಕೋನದ ಸಾರವನ್ನು ಬದಲಾಯಿಸಲಾಗುತ್ತಿದೆ, ಈ ರಾಷ್ಟ್ರವನ್ನು ಒಟ್ಟಿಗೆ ಕರೆದೊಯ್ಯುವ ಜಾತ್ಯತೀತ ಸಂರಚನೆಯನ್ನು ದುರ್ಬಲಗೊಳಿಸುತ್ತಿದೆ” ಎಂದು ಅವರು ಹೇಳಿದ್ದಾರೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement