Published
1 year agoon
By
Akkare News
ಪುತ್ತೂರು: 2025ರ ಡಿ. 27, 28, 29ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹದ ಮಾಹಿತಿಯನ್ನು ಪುತ್ತಿಲ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ನೀಡಿದರು.
ಗೋ ಶಾಲೆಗೆ ಗೋಮಾಳದ ಜಾಗಕ್ಕೆ ಮನವಿ:
ಪೇಜಾವರ ಶ್ರೀಗಳ ಅಪೇಕ್ಷೆಯಂತೆ ಗೋಶಾಲೆ ನಿರ್ಮಾಣ ಮಾಡುವ ಕಾಯಕಕ್ಕೂ ಮುಂದಾಗಿದ್ದೇವೆ. ಇದಕ್ಕಾಗಿ ಮುಂಡೂರಿನಲ್ಲಿ ಗೋಮಾಳದ ಜಾಗ ನೋಡಲಾಗಿದೆ. ಈ ಜಾಗವನ್ನು ಮಂಜೂರು ಮಾಡುವಂತೆ ಕಂದಾಯ ಇಲಾಖೆಗೆ ಅವರಿಗೆ ಮನವಿ ನೀಡಲಾಗಿದೆ. ಸರಕಾರ ಜಾಗ ಮಂಜೂರು ಮಾಡಿದರೆ ಗೋಶಾಲೆ ನಿರ್ಮಾಣ ಮಾಡುತ್ತೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮ, ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಮಠ, ಜತೆ ಕಾರ್ಯದರ್ಶಿ ರಾಜು ಶೆಟ್ಟಿ, ಮಾಧ್ಯಮ ಸಂಚಾಲಕ ನವೀನ್ ರೈ ಪಂಜಳ, ಸದಸ್ಯ ಪ್ರಜ್ವಲ್ ಘಾಟೆ ಉಪಸ್ಥಿತರಿದ್ದರು.