Published
2 months agoon
By
Akkare News
ವಿರಾಜಪೇಟೆ ತಾಲೂಕು ಕರಡ ನಿವಾಸಿ ದಿವಂಗತ ಕಟ್ಟಿ ಬಿದ್ದಪ್ಪ-ಶೀಲಾ ದಂಪತಿ ಪುತ್ರಿ ಕೊಟ್ಟೋಳಿ ಗ್ರಾಮದ ನಿವಾಸಿ ಎಂ.ಎಂ ದಿನೇಶ್ ಎಂಬುವವರ ಪತ್ನಿ ಕಾವೇರಮ್ಮ (24) ನೇಣಿಗೆ ಶರಣಾದ ಮಹಿಳೆ ಎಂದು ತಿಳಿಯಲಾಗಿದೆ.
ದಿನೇಶ್-ಕಾವೇರಮ್ಮ ಮದುವೆಯಾಗಿ ಸುಮಾರು 4 ವರ್ಷಗಳು ಕಳೆದಿದೆ. ಫೆ.12 ರಂದು ಪತಿ ದಿನೇಶ್ ತಮ್ಮ ಮನೆಯ ಸನೀಹದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಮನೆಯಲ್ಲಿ ಮಗುವಿನ ಕೂಗಾಟ ಕೇಳಿ ಬಂದು ನೋಡುವಾಗ ಕಾವೇರಮ್ಮ ಸ್ನಾನದ ಕೋಣೆಯಲ್ಲಿ ಸೀರೆಯಿಂದ ನೇಣುಬಿಗಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಮೃತಳ ಅಣ್ಣ ಎಂ.ಎ ತಿಮ್ಮಯ್ಯ ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ಜನನ ಕಾರ್ಯ ಕೈಗೊಂಡಿದ್ದಾರೆ.