Connect with us

ಅಪಘಾತ

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; 14 ಮಹಿಳೆಯರು ಸೇರಿದಂತೆ 18 ಸಾವು

Published

on

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಿಂದ 18 ಜನರು ಸಾವನ್ನಪ್ಪಿದ್ದಾರೆ. ಪ್ಲಾಟ್‌ಫಾರ್ಮ್‌ಗಳಲ್ಲಿ ಸಾಕಷ್ಟು ಜನಸಂದಣಿ ಇದ್ದು, ಅವಘಡ ಸಂಭವಿಸಿದೆ. ನವದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ (ಫೆಬ್ರವರಿ 15) ರಾತ್ರಿ ಸಂಭವಿಸಿದ ಕಾಲ್ತುಳಿತದಿಂದ 18 ಜನರು ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಲೋಕನಾಯಕ್ ಜೈ ಪ್ರಕಾಶ್ ನಾರಾಯಣ ಆಸ್ಪತ್ರೆ ಮತ್ತು ಲೇಡಿ ಹಾರ್ಡಿಂಜ್ ವೈದ್ಯಕೀಯ ಕಾಲೇಜಿಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.



ಮಾಹಿತಿ ಪ್ರಕಾರ, ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರಲ್ಲಿ 9 ಮಹಿಳೆಯರು, 4 ಪುರುಷರು ಮತ್ತು 5 ಮಕ್ಕಳು ಸೇರಿದ್ದಾರೆ. ಪ್ರಯಾಗರಾಜ್ ಮಹಾಕುಂಭಕ್ಕೆ ತೆರಳುವ ಯಾತ್ರಾರ್ಥಿಗಳ ಭಾರೀ ಜನಸಂದಣಿಯು ಸಂಜೆಯಿಂದಲೇ ನವದೆಹಲಿ ರೈಲು ನಿಲ್ದಾಣದಲ್ಲಿ ಜಮಾಯಿಸಲಾರಂಭಿಸಿತು ಎಂದು ಹೇಳಲಾಗಿದೆ. ನಿಲ್ದಾಣದ ಎಲ್ಲಾ ಪ್ಲಾಟ್‌ಫಾರ್ಮ್‌ಗಳಲ್ಲಿ ಭಾರಿ ಜನಸಂದಣಿ ಇತ್ತು, ಆದರೆ ಪ್ಲಾಟ್‌ಫಾರ್ಮ್ ಸಂಖ್ಯೆ 12, 13, 14 ಮತ್ತು 15 ರಲ್ಲಿ ಭಾರೀ ಜನ ಜಮಾಯಿಸಿದ್ದರು ಎಂದು ಅನೇಕ ಪ್ರತ್ಯಕ್ಷದರ್ಶಿಗಳು ಹೇಳಿದರು.

 

ಪ್ರತ್ಯಕ್ಷದರ್ಶಿಗಳ ಪ್ರಕಾರ, ರೈಲುಗಳ ನಿಲುಗಡೆಗೆ ಸಂಬಂಧಿಸಿದಂತೆ ಪ್ಲಾಟ್‌ಫಾರ್ಮ್ ಸಂಖ್ಯೆಗಳಲ್ಲಿ ಬದಲಾವಣೆಗಳನ್ನು ರೈಲ್ವೆ ಪದೇ ಪದೇ ಘೋಷಿಸಿದ್ದರಿಂದ ಕಾಲ್ತುಳಿತದ ಪರಿಸ್ಥಿತಿ ಉದ್ಭವಿಸಿದೆ. ಪ್ರಯಾಗರಾಜ್ ಎಕ್ಸ್‌ಪ್ರೆಸ್ ಪ್ಲಾಟ್‌ಫಾರ್ಮ್ ಸಂಖ್ಯೆ 14 ರಲ್ಲಿ ನಿಂತಿದೆ ಎಂದು ರೈಲ್ವೆ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಕೆಪಿಎಸ್ ಮಲ್ಹೋತ್ರಾ ಹೇಳಿದ್ದಾರೆ. ಈ ರೈಲು ಹತ್ತಲು ಪ್ಲಾಟ್‌ಫಾರ್ಮ್‌ನಲ್ಲಿ ಅಪಾರ ಸಂಖ್ಯೆಯ ಪ್ರಯಾಣಿಕರು ಸೇರಿದ್ದರು.

ಆದರೆ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ಮತ್ತು ಭುವನೇಶ್ವರ ರಾಜಧಾನಿ ತಡವಾಗಿ ಓಡುತ್ತಿದ್ದವು. ಈ ರೈಲುಗಳ ಪ್ರಯಾಣಿಕರು ಪ್ಲಾಟ್‌ಫಾರ್ಮ್ ಸಂಖ್ಯೆ 12, 13 ಮತ್ತು 14 ರಲ್ಲೂ ಇದ್ದರು. ಡಿಸಿಪಿ ಮಲ್ಹೋತ್ರಾ ಅವರು, “ನಾವು ಜನಸಂದಣಿಯನ್ನು ನಿರೀಕ್ಷಿಸಿದ್ದೇವೆ, ಆದರೆ ಎಲ್ಲವೂ ಕೆಲವೇ ಸೆಕೆಂಡುಗಳಲ್ಲಿ ಸಂಭವಿಸಿತು. ಘಟನೆಯ ಬಗ್ಗೆ ರೈಲ್ವೆ ತನಿಖೆ ನಡೆಸಲಿದೆ, ಜವಾಬ್ದಾರಿಯುತ ನೌಕರರು ಮತ್ತು ಅಧಿಕಾರಿಗಳನ್ನು ವಿಚಾರಣೆ ಮಾಡಿದ ನಂತರ, ಘಟನೆಯ ಹಿಂದಿನ ನಿಜವಾದ ಕಾರಣವನ್ನು ನಾವು ತಿಳಿಯುತ್ತೇವೆ.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement