Connect with us

ಸ್ಥಳೀಯ

ಛಾಯಾಗ್ರಹಣ ಸ್ಪರ್ಧೆ: ದಯಾ ಕುಕ್ಕಾಜೆ ಅವರಿಗೆ ರಾಷ್ಟ್ರ ಪ್ರಶಸ್ತಿ

Published

on

ಪುತ್ತೂರು:ಖ್ಯಾತ ಛಾಯಾಗ್ರಾಹಕ ದಯಾ ಕುಕ್ಕಾಜೆ ಅವರ ರಾಷ್ಟ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ..


DOUBLE PIXEL NATIONAL SALON 2025 ಆಯೋಜಿಸಿದ ಛಾಯಾಗ್ರಹಣ ಸ್ಪರ್ಧೆಯಲ್ಲಿ ಖ್ಯಾತ ಛಾಯಾಗ್ರಾಹಕ ದಯಾನಂದ ಕುಕ್ಕಾಜೆ ಅವರು ಸೆರೆ ಹಿಡಿದ ಫೋಟೋಗೆ ರಾಷ್ಟ್ರ ಪ್ರಶಸ್ತಿ ದೊರೆತಿದೆ.

 

ಫೊಟೋಜರ್ನಲಿಸಂ ವಿಭಾಗದಲ್ಲಿ ಹೆಲ್ಪ್ ಲೆಸ್ ಹ್ಯಾಂಡ್ ಶೀರ್ಷಿಕೆಯಡಿ ಸೆರೆ ಹಿಡಿದ ಛಾಯಾಗ್ರಹಣಕ್ಕೆ ಪಿ ಎಂ ಪಿ ಸಿಲ್ವರ್ ಅವಾರ್ಡ್ ಹಾಗೂ ಓಪನ್ ಮೊನೋಕ್ರೋಮ್ ವಿಭಾಗದಲ್ಲಿ ಬ್ರೈಟ್ ಪ್ಯೂಚರ್ ಶೀರ್ಷಿಕೆಯಡಿ ಸೆರೆಹಿಡಿದ ಛಾಯಾಗ್ರಹಣವು ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿದೆ. ದಯಾನಂದ ಕುಕ್ಕಾಜೆಯವರು ಮಂಗಳೂರಿನ ಪ್ರಸಿದ್ಧ ಹಿರಿಯ ಛಾಯಾಗ್ರಾಹಕರಾಗಿದ್ದು, ಈ ಹಿಂದೆಯೂ ಹಲವಾರು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರು ಕಳೆದ 23 ವರ್ಷಗಳಿಂದ ದಾಯ್ಜಿ ವರ್ಲ್ಡ್ ಸಂಸ್ಥೆಯಲ್ಲಿ ಫೋಟೋ ಜರ್ನಲಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement