Connect with us

ಇತರ

ಉಪ್ಪಿನಂಗಡಿ ಕಾಲೇಜಿನಲ್ಲಿ ಸರಣಿ ಉಪನ್ಯಾಸ ಕಾರ್ಯಕ್ರಮ ಸಮಸ್ಯೆಗಳನ್ನು ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು: ಶರ್ಮಿಳಾ

Published

on

ಮನುಷ್ಯನಾದ ಮೇಲೆ ಸಮಸ್ಯೆಗಳು ಇದ್ದೆ ಇರುತ್ತದೆ. ಆದರೆ ಅದನ್ನು ಯಾವ ರೀತಿ ಸ್ವೀಕರಿಸುತ್ತೇವೆ ಎಂಬುದು ಮುಖ್ಯವಾಗಿರುತ್ತದೆ.
ಪ್ರತಿಯೊಬ್ಬರೂ ಸಮಯವನ್ನು ನಮಗೆ ಹೊಂದಿಸಿಕೊಳ್ಳಬಾರದು ನಾವು ಸಮಯಕ್ಕೆ ಹೊಂದಿಕೊಳ್ಳಬೇಕೆಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸೈಕಲಾಜಿ ವಿಭಾಗದ ಮುಖ್ಯಸ್ಥರಾದ ಶರ್ಮಿಳಾ ಹೇಳಿದರು.

 

ಇವರು ಇತ್ತೀಚಿಗೆ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಮತ್ತು ಭರವಸಾ ಕೋಶ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಆಯೋಜಿಸಿದ ಸರಣಿ ಉಪನ್ಯಾಸ ಕಾರ್ಯಕ್ರಮದ ಎರಡನೇ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ “ಮೆಡಿಟೇಶನ್ ಮತ್ತು ರಿಲ್ಯಾಕ್ಸೇಶನ್ ಟೆಕ್ನಿಕ್ಸ್” ಎಂಬ ವಿಷಯದ ಕುರಿತು ಮಾತನಾಡಿದರು. ವಿವಿಧ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ವಿಧಾನಗಳನ್ನು ವಿವರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರವಿರಾಜ್ ಎಸ್ ಇವರು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್ ಯೋಜನಾಧಿಕಾರಿಯಾದ ಶ್ರೀ ಕೇಶವ ಕುಮಾರ್ ಬಿ ಉಪಸ್ಥಿತರಿದ್ದರು.

 

ಸ್ವಯಂ ಸೇವಕಿಯರಾದ ಪುಷ್ಪಾವತಿ, ಸಿಂಚನಾ ಎ.ಎಲ್, ತೀರ್ಥ, ಯಕ್ಷಿತಾ,ಆಶಾ ಜಿ.ಎಸ್, ಉಷಾ ಜಿ.ಎಸ್ ಪ್ರಾರ್ಥನೆ ಹಾಡಿದರು, ಕೌಶಿತ ಸ್ವಾಗತಿಸಿದರು, ಗೀತಾ ವ್ಯಕ್ತಿ ಪರಿಚಯ ಮಾಡಿದರು, ಪ್ರಿಯಲತಾ ವಂದಿಸಿದರು ಹಾಗೂ ಸಂಗೀತಾ ಕಾರ್ಯಕ್ರಮ ನಿರ್ವಹಿಸಿದರು.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement