Connect with us

ಇತ್ತೀಚಿನ ಸುದ್ದಿಗಳು

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ’

Published

on

ಉಜಿರೆ:ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ಲೌಕಿಕ ಕಷ್ಟಗಳು, ಸಮಸ್ಯೆಗಳು ಪರಿಹಾರವಾಗಿ ನಾವು ದೇವರ ಅನುಗ್ರಹಕ್ಕೆ ಪಾತ್ರರಾಗುತ್ತೇವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

 

ಧರ್ಮಸ್ಥಳದಲ್ಲಿ ಪ್ರವಚನಮಂಟಪದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಶಿವರಾತ್ರಿ ಜಾಗರಣೆಗೆ ಪಾದಯಾತ್ರೆಯಲ್ಲಿ ಬಂದ ಭಕ್ತರಿಗೆ ಮಂಗಳವಾರ ಶುಭಹಾರೈಸಿ ಮಾತನಾಡಿದರು.
ದೇವರಲ್ಲಿ ಭಕ್ತಿ ಮತ್ತು ನಂಬಿಕೆಯಲ್ಲಿ ಭಯ, ಸಂಶಯ ಇರಬಾರದು. ನಾವು ಕೊಂಚ ತಪ್ಪಿದರೂ ದೇವರು ನಮ್ಮ ರಕ್ಷಣೆ ಮಾಡುತ್ತಾರೆ. ನಂಬಿಕೆ ಮತ್ತು ವಿಶ್ವಾಸದಿಂದ ನಮ್ಮ ದೋಷಗಳ ನಿವಾರಣೆಯಾಗುತ್ತದೆ. ಭಕ್ತಿಯಲ್ಲಿ ದೈಹಿಕ ಶಕ್ತಿಗಿಂತಲೂ ಮಾನಸಿಕ ಶಕ್ತಿ, ಸಂಕಲ್ಪ ಮಿಗಿಲಾದುದು ಎಂದರು.

ಪಾದಯಾತ್ರಿಗಳಿಗೆ ನಿರಂತರ ಪ್ರೇರಣೆ, ಮಾರ್ಗದರ್ಶನ ನೀಡುತ್ತಿರುವ ಬೆಂಗಳೂರಿನ ಗುರು ಹನುಮಂತಪ್ಪ ಸ್ವಾಮೀಜಿ, ಬಳಗದವರನ್ನು ಅಭಿನಂದಿಸಿದರು.

ನಾಗಸಾಧು ಧನಂಜಯ ಗುರೂಜಿ ಮಾತನಾಡಿ, ಗರ್ಭಗುಡಿಯಲ್ಲಿ ಮಂಜುನಾಥ ಸ್ವಾಮಿಯ ದರ್ಶನವಾದರೆ, ಹೊರಗೆ ಬಂದು ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಮಾತನಾಡುವ ಮಂಜುನಾಥನ ದರ್ಶನ, ಆಶೀರ್ವಾದ ಪಡೆದು ಪುನೀತರಾಗುತ್ತೇವೆ. ಹೆಗ್ಗಡೆಯವರ ಮೂಲಕ ನಾವು ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗುತ್ತೇವೆ ಎಂದರು.

 

 

 

ಸ್ವಚ್ಛತೆ ಕಾಪಾಡಿ: ಧರ್ಮಸ್ಥಳಕ್ಕೆ ಬಂದವರು ನೇತ್ರಾವತಿ ನದಿಯಲ್ಲಿ ಮಿಂದು ಬಟ್ಟೆ, ಸಾಬೂನು, ಕಸವನ್ನು ನೀರಿಗೆ ಹಾಕಿ ಅಪವಿತ್ರ ಮಾಡಬಾರದು. ಇದರಿಂದ ಪಾಪಪ್ರಜ್ಞೆ ಹೆಚ್ಚಾಗುತ್ತದೆ ಎಂದು ಅವರು ಭಕ್ತರಿಗೆ ಎಚ್ಚರಿಕೆ ನೀಡಿದರು.
ಶಿವಕ್ಷೇತ್ರ ಯಾವಗಲೂ ಶಾಂತವಾಗಿದ್ದು, ಪವಿತ್ರ ಧರ್ಮಸ್ಥಳವನ್ನು ಹಾಗೂ ನೇತ್ರಾವತಿ ನದಿಯನ್ನು ಸ್ವಚ್ಛವಾಗಿಡಲು ಸಹಕರಿಸಿ. ಧರ್ಮಸ್ಥಳದ ಅನ್ನದಾನ ವಿಶ್ವವಿಖ್ಯಾತವಾಗಿದೆ. ಭಕ್ತರೂ ಪವಿತ್ರ ಕಾಯಕಕ್ಕೆ ದಾನ ನೀಡಬಹುದು ಎಂದರು.
ಪಾದಯಾತ್ರೆಯ ರೂವಾರಿ ಹನುಮಂತಪ್ಪ ಗುರೂಜಿ ಮಾತನಾಡಿದರು. ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ.ಶೆಟ್ಟಿ ಭಾಗವಹಿಸಿದ್ದರು.
ಮರಿಯಪ್ಪ ಸ್ವಾಗತಿಸಿದರು. ಶಶಿಕುಮಾರ ವಂದಿಸಿದರು.
ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಪಾದಯಾತ್ರಿಗಳಿಗೆ ಶುಭ ಹಾರೈಸಿದರು

 

 

Continue Reading
Click to comment

Leave a Reply

Your email address will not be published. Required fields are marked *

Advertisement