Published
11 months agoon
By
Akkare News
ಬೆಳ್ತಂಗಡಿ, ಮಾ.31 : ಬೈಕ್ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಯಕ್ಷಗಾನ ಭಾಗವತರೋರ್ವರು ಮೃತಪಟ್ಟ ಘಟನೆ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ಥಾನದ ತಿರುವು ರಸ್ತೆಯಲ್ಲಿ ಇಂದು ಮುಂಜಾನೆ ನಡೆದಿದೆ.

ಸತೀಶ್ ಆಚಾರ್ಯ ವೇಣೂರು ಅಂಡಿಂಜೆ (40) ಮೃತ ಯಕ್ಷಗಾನ ಭಾಗವತ.

ಮಂಗಳಾದೇವಿ ಯಕ್ಷಗಾನ ಮೇಳದ ಯಕ್ಷಗಾನ ಭಾಗವತರಾದ ಸತೀಶ್ ಆಚಾರ್ಯ ರವರು ಮಾ. 31ರಂದು ಸುಳ್ಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮವನ್ನು ಮುಗಿಸಿ ಮುಂಜಾನೆ 4 ಗಂಟೆಗೆ ಅವರು ತಮ್ಮ ಬೈಕ್ನಲ್ಲಿ ನಾರಾವಿಯಿಂದ ಅಂಡಿಂಜೆಗೆ ಬರುತ್ತಿದ್ದರು. ಈ ಸಂದರ್ಭದಲ್ಲಿ ಅಂಡಿಂಜೆ ಕಿಲಾರ ಮಾರಿಗುಡಿ ದೇವಸ್ಥಾನದ ಸಮೀಪದ ತಿರುವು ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ಹಾಗೂ ಇವರು ಹೋಗುತ್ತಿದ್ದ ಬೈಕ್ ಪರಸ್ಪರ ಢಿಕ್ಕಿಯಾಗಿದೆ. ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ನಲ್ಲಿದ್ದವರಿಗೂ ಗಾಯವಾಗಿದೆ ಎನ್ನಲಾಗಿದೆ.



ಮೃತರು ತಾಯಿ, ಸಹೋದರಿ ಸಹೋದರ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ. ಈ ಬಗ್ಗೆ ವೇಣೂರು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.


