Published
12 hours agoon
By
Akkare Newsಉಪ್ಪಿನಂಗಡಿ: ಅಕ್ರಮ ಮರಳು ಗಣಿಗಾರಿಕೆ ಆರೋಪದಡಿ ವಳಾಲಿನ ನೇತ್ರಾವತಿ ನದಿ ಕಿನಾರೆಯಲ್ಲಿ ನಡೆಯುತ್ತಿರುವ ಮರಳು ಗಣಿಗಾರಿಕೆ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪ್ರೊಬೆಷನರಿ ಕರ್ತವ್ಯದಲ್ಲಿರುವ ಐಪಿಎಸ್ ಅಧಿಕಾರಿ ಮನೀಷಾ ಅವರ ನೇತೃತ್ವದಲ್ಲಿ ದಾಳಿ ನಡೆಯಿತು.
ಈ ಸಂದರ್ಭ ಮರಳು ಗಣಿಗಾರಿಕೆ ಮಾಡುವವರಲ್ಲಿ ಅದಕ್ಕೆ ಸಂಬಂಧಿಸಿದ ಪರವಾನಿಗೆಗಳಿತ್ತು. ಆದರೆ ಜೆಸಿಬಿ ಬಳಸಿ ಅವರು ಮರಳು ಗಣಿಗಾರಿಕೆ ಮಾಡುತ್ತಿದ್ದರಿಂದ ಈ ಬಗ್ಗೆ ಸೂಕ್ತ ಕ್ರಮಕ್ಕೆ ಗಣಿ ಇಲಾಖೆಗೆ ಬರೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.