Published
5 days agoon
By
Akkare Newsಬಂಟ್ವಾಳ ಎಪ್ರಿಲ್ 08: ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಇಂದು ಸಂಜೆ ವೇಳೆ ಮಳೆ ಸುರಿದಿದೆ. ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆಯಾಗಿದೆ.
ಗಾಳಿಗೆ ತೆಂಗಿನ ಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾನೆ
ಮಾಣಿ- ಪುತ್ತೂರು ರಸ್ತೆಯ ನೇರಳಕಟ್ಟೆಯಲ್ಲಿ ತೆಂಗಿನಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರನೋರ್ವ ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆ ನಡೆದಿದೆ. ಘಟನೆಯಿಂದ ಹಲವು ವಿದ್ಯುತ್ ಕಂಬಗಳು ದರೆಗುರುಳಿವೆ