Published
11 months agoon
By
Akkare News
ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ಒಟ್ಟಾಗಿ ಮತ್ತು ಇ ಪಳನಿಸ್ವಾಮಿ ನೇತೃತ್ವದಲ್ಲಿ ಹೋರಾಡಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
ಎಐಎಡಿಎಂಕೆ ಮುಖ್ಯಸ್ಥ ಇ ಪಳನಿಸ್ವಾಮಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಶಾ, ಈ ಚುನಾವಣೆಯನ್ನು ರಾಷ್ಟ್ರೀಯವಾಗಿ ನರೇಂದ್ರ ಮೋದಿ ಮತ್ತು ತಮಿಳುನಾಡಿನಲ್ಲಿ ಇಪಿಎಸ್ ಮತ್ತು ಎಐಎಡಿಎಂಕೆ ಮುನ್ನಡೆಸಲಿವೆ ಎಂದು ಹೇಳಿದರು.
ಬಿಜೆಪಿಯ ತಮಿಳುನಾಡು ಘಟಕದ ಅಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ದೃಢಪಡಿಸಿದ ಕೆಲವೇ ಗಂಟೆಗಳ ನಂತರ ಬಿಜೆಪಿ ಹಾಗೂ ಎಐಎಡಿಎಂಕೆ ಮೈತ್ರಿ ಖಚಿತವಾಯಿತು. ಬಳಿಕ ಈ ಜಂಟಿ ಸುದ್ದಿಗೋಷ್ಠಿ ನಡೆಯಿತು.
1998 ರಿಂದ ಎಐಎಡಿಎಂಕೆ ಎನ್ ಡಿಎಯ ಭಾಗವಾಗಿದೆ ಮತ್ತು ಪ್ರಧಾನಿ ಮೋದಿ ಮತ್ತು ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಹಿಂದೆ ಒಟ್ಟಿಗೆ ಕೆಲಸ ಮಾಡಿದ್ದಾರೆ. ನಮ್ಮ ಮೈತ್ರಿಕೂಟವು ಹೆಚ್ಚು ಬಲಿಷ್ಠವಾಗಿದೆ, ಎನ್ ಡಿಎ ಪ್ರಮುಖ ಗೆಲುವು ಸಾಧಿಸುತ್ತದೆ ಮತ್ತು ತಮಿಳುನಾಡಿನಲ್ಲಿ ಎನ್ಡಿಎ ಸರ್ಕಾರ ರಚನೆಯಾಗುತ್ತದೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ ಎಂದು ಅಮಿತ್ ಶಾ ಹೇಳಿದರು.