Published
5 hours agoon
By
Akkare Newsನವದೆಹಲಿ: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ ಸಿಲುಕಿ 26 ಮಂದಿ ಅಮಾಯಕರು ಜೀವ ಕಳೆದುಕೊಂಡಿರುವ ಬೆನ್ನಲೇ ಪಾಕ್ ವಿರುದ್ಧ ಪ್ರತಿಕಾರಕ್ಕೆ ಭಾರತ ಮುಂದಾಗಿದೆ.
ಉಗ್ರರ ದಾಳಿಯ ಬೆನ್ನಲ್ಲೇ ಬುಧವಾರ ಸರ್ವಪಕ್ಷ ಸಮಿತಿ ಸಭೆ ನಡೆಸಿದ ಕೇಂದ್ರ, ಪಾಕ್ ವಿರುದ್ಧ ಐದು ಕಠಿಣ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು ಇದರಲ್ಲಿ 1960ರ ಸಿಂಧೂ ನದಿ ಒಪ್ಪಂದಕ್ಕೆ ತಡೆ, ಪಾಕಿಸ್ಥಾನಕ್ಕೆ ನೀಡುತ್ತಿದ್ದ ವೀಸಾ ರದ್ದು, ಅಟ್ಟಾರಿ-ವಾಘಾ ಗಡಿ ರಸ್ತೆ ಬಂದ್, ಭಾರತದ ರಾಯಭಾರಿ ಗಳು ವಾಪಸ್, ಭಾರತದಲ್ಲಿರುವ ಪಾಕಿಗಳಿಗೆ ಹಿಂದಿರುಗಲು 48 ತಾಸು ಗಡುವು ನೀಡಲಾಯಿತು.
ಇದೀಗ ಕೇಂದ್ರ ಗೃಹ ಸಚಿವಾಲಯ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೆ ಖಡಕ್ ಸೂಚನೆಯೊಂದನ್ನು ರವಾನೆ ಮಾಡಿದ್ದು ಅದರಂತೆ ತಮ್ಮ ತಮ್ಮ ರಾಜ್ಯದಲ್ಲಿರುವ ಪಾಕಿಸ್ತಾನಿಗಳನ್ನು ಗುರುತಿಸಿ ಆದಷ್ಟು ಬೇಗ ಅವರನ್ನು ಗಡಿಪಾರು ಮಾಡುವಂತೆ ಸೂಚನೆ ನೀಡಿದ್ದಾರೆ. ಈಗಾಗಲೇ ಭಾರತಕ್ಕೆ ಭೇಟಿ ನೀಡುವ ಪಾಕ್ ಪ್ರಜೆಗಳಿಗೆ ನೀಡುವ ವೀಸಾವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ ಅಲ್ಲದೆ ಪ್ರಸ್ತುತ ನೀಡಿರುವ ವೀಸಾಗಳನ್ನು ಕೂಡ ರದ್ದು ಮಾಡಲಾಗುವುದು ಜೊತೆಗೆ ಭಾರತದಲ್ಲಿರುವ ಪಾಕ್ ಪ್ರಜೆಗಳು 48 ಗಂಟೆಗಳಲ್ಲಿ ಭಾರತವನ್ನು ತೊರೆಯಬೇಕು ಎಂದು ಸೂಚನೆ ನೀಡಲಾಗಿದೆ.
ಕಾಶ್ಮೀರದ ಪಹಲ್ಗಾಮ್ ದಾಳಿಯ ಯೋಜನೆ ಮತ್ತು ಅದನ್ನು ಕಾರ್ಯಗತಗೊಳಿಸುವಲ್ಲಿ ಪಾಕಿಸ್ತಾನವು ಭಾಗಿಯಾಗಿದೆ ಎಂಬುದಕ್ಕೆ ತಮ್ಮ ಬಳಿ ಪುರಾವೆಗಳಿವೆ ಎಂದ ಭಾರತ, ಗುರುವಾರ ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್ಡಮ್, ಇಟಲಿ, ಫ್ರಾನ್ಸ್, ಜರ್ಮನಿ, ರಷ್ಯಾ ಮತ್ತು ಚೀನಾದ ಹಿರಿಯ ವಿದೇಶಿ ರಾಜತಾಂತ್ರಿಕರಿಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಈ ಪುರಾವೆಯನ್ನು ತೋರಿಸಿದೆ.