Connect with us

ಇತರ

ದಸರಾ ವೇಳೆಗೆ ಕಾವೇರಿ ಆರತಿ: ಡಿಸಿಎಂ ಡಿ.ಕೆ.ಶಿವಕುಮಾರ್

Published

on

ಮುಂದಿನ ದಸರಾ ಹಬ್ಬದ ವೇಳೆಗೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಆರಂಭಿಸಲು ನಿರ್ಧರಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಮಂಡ್ಯ (ಏ.26): ಮುಂದಿನ ದಸರಾ ಹಬ್ಬದ ವೇಳೆಗೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಆರಂಭಿಸಲು ನಿರ್ಧರಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ನಲ್ಲಿರುವ ಅತಿಥಿಗೃಹದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಈ ಹಿಂದೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಮಾಡುವುದಾಗಿ ಘೋಷಣೆ ಮಾಡಿದ್ದೆ. ಅದರಂತೆ ಸಚಿವ ಸಂಪುಟ ಸಭೆಯಲ್ಲಿ 92 ಕೋಟಿ ಮಂಜೂರಾಗಿದೆ. ಕಾವೇರಿ ಆರತಿ ರಾಜ್ಯದ ಸಂಸ್ಕೃತಿ. ಪ್ರವಾಸಿಗರು ಧಾರ್ಮಿಕವಾಗಿ ಪೂಜೆ ಮಾಡಲು ಅವಕಾಶ ಮಾಡಿಕೊಡಲು ತೀರ್ಮಾನಿಸಿರುವುದಾಗಿ ಹೇಳಿದರು.

ಕಾವೇರಿ ಆರತಿ ರಾಜ್ಯದ ಸಂಸ್ಕೃತಿ. ಕಾವೇರಿ ನೀರು ಅವಲಂಬಿಸಿರುವ ಎಲ್ಲಾ ಜನರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಬಹುದು. ಕೇರಳ ತಮಿಳುನಾಡು ಜನರು ಬಂದು ಪೂಜೆ ಸಲ್ಲಿಸಬಹುದು ಎಂದ ಅವರು, ಕಾವೇರಿ ಆರತಿ ಹೇಗಿರಬೇಕು, ಯಾವ ಸ್ಥಳದಲ್ಲಿ ನಡೆಯಬೇಕು ಎಂಬ ಬಗ್ಗೆ ಸಲಹೆ ನೀಡಲು ಇಲ್ಲಿಗೆ ಬಂದಿದ್ದೇನೆ. ಅದಕ್ಕಾಗಿ ಇಬ್ಬರು ಜಿಲ್ಲಾಧಿಕಾರಿಗಳನ್ನು ಒಳಗೊಂಡಂತೆ ಅಧಿಕಾರಿಗಳ ಸಮಿತಿ ರಚನೆ ಮಾಡಿದ್ದೇನೆ. ಸಾಂಸ್ಕೃತಿಕ ಮತ್ತು ಧಾರ್ಮಿಕವಾಗಿ ಕಾವೇರಿ ಆರತಿ ಹೇಗಿರಬೇಕು ಎಂಬುದನ್ನು ತಿಳಿಸಿದ್ದೇನೆ ಎಂದರು.

 

 

 

ಕಾವೇರಿ ಆರತಿಗೆ ಬರುವ ಜನರಿಗೆ ಎರಡು ರೀತಿಯ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಒಂದು ಉಚಿತ ಪ್ರವೇಶ ಹಾಗೂ ಟಿಕೆಟ್ ಪಡೆದು ಪ್ರವೇಶ ನೀಡಲು ನಿರ್ಧರಿಸಿದೆ. ಹತ್ತು ಸಾವಿರ ಜನರು ಒಂದೇ ಕಡೆ ಕುಳಿತು ಕಾವೇರಿ ಆರತಿ ನೋಡುವಂತೆ ವ್ಯವಸ್ಥೆ ಮಾಡುತ್ತಿದ್ದೇವೆ. ವಾರದಲ್ಲಿ ಎಷ್ಟು ಬಾರಿ ಆರತಿ ನಡೆಯಬೇಕು ಎಂಬುದನ್ನು ಮುಂದೆ ತೀರ್ಮಾನಿಸುತ್ತೇವೆ. ಇದರಿಂದ ಬಂದ ಹಣವನ್ನ ನಾವು ಪಂಚಾಯಿತಿ ಅಭಿವೃದ್ಧಿಗೆ ಬಳಸುತ್ತೇವೆ. ಇಲ್ಲಿನ ಹಣವನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಆಸೆ ನಮಗಿಲ್ಲ ಎಂದು ನುಡಿದರು.

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version