Published
2 days agoon
By
Akkare Newsಸಂಚಾರ ಪೊಲೀಸರ ಅಮಾನವೀಯ, ದುರ್ನಢತನೆಯ ವರ್ತನೆಯಿಂದ ಮಗು ಬಿದ್ದು ಮೃತಪಟ್ಟಿರುವ ಘಟನೆ ಬಳಿಕ ಎಚ್ಚೆತ್ತುಕೊಂಡ ರಾಜ್ಯ ಪೊಲೀಸ್ ಇಲಾಖೆಯು ವಾಹನ ತಪಾಸಣೆ ಮಾಡುವಾಗ ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಕೆಲವು ಮಾರ್ಗಸೂಚಿ ಹೊರಡಿಸಿದ್ದಾರೆ. ವಾಹನಗಳಿಗೆ ಸಂಬಂಧಪಟ್ಟ ದಾಖಲೆ ಪರೀಕ್ಷಿಸಲು ಸಕಾರಣವಿಲ್ಲದೆ ವಾಹನಗಳನ್ನು ತಡೆಯಬಾರದು. ಕಣ್ಣಿಗೆ ಕಾಣುವ ಸಂಚಾರ ನಿಯಮ ಉಲ್ಲಂಘನೆಗಳು ಕಂಡುಬಂದಲ್ಲಿ ಮಾತ್ರವೇ ಅಂತಹ ವಾಹನಗಳನ್ನು ನಿಲ್ಲಿಸಿ ಪ್ರಕರಣ ದಾಖಲಿಸುವುದು. ಹೆದ್ದಾರಿಗಳಲ್ಲಿ ಜಿಗ್ ಜಾಗ್ ಮಾದರಿಯಲ್ಲಿ ಬ್ಯಾರಿಕೇಡ್ ಹಾಕಿ ವಾಹನಗಳನ್ನು ತಡೆಯಬಾರದು. ರಸ್ತೆಯಲ್ಲಿ ದಿಢೀರನೆ ಅಡ್ಡಬಂದು ವಾಹನ ನಿಲ್ಲಿಸುವಂತೆ ಹೇಳಬಾರದು.
ದ್ವಿಚಕ್ರ ವಾಹನ ಹಿಂಬದಿ ಸವಾರನನ್ನು ಹಿಡಿದು ಎಳೆಯುವುದು ಹಾಗೂ ವಾಹನ ಗಳ ಕೀಲಿಕೈ ತೆಗೆದುಕೊಳ್ಳಬಾರದು. ಕಾನೂನು ಮತ್ತು ಸುವ್ಯವಸ್ಥೆ ಪೊಲೀಸರು ನಡೆಸುವ ನಾಕಾಬಂಧಿ ಪ್ರಕ್ರಿಯೆಗಳನ್ನು ಸಾಧ್ಯವಾದಷ್ಟು ಹೆದ್ದಾರಿಗಳಲ್ಲಿ ನಡೆಸಬಾರದು. ತಪಾಸಣೆ ಸಂದರ್ಭ ಇಂತಹ ಕಾನೂನು ಸುವ್ಯವಸ್ಥೆ ಪೊಲೀಸರ ನೆರವು ಪಡೆಯಬೇಕು ಎಂದು ಮಾರ್ಗಸೂಚಿಯಲ್ಲಿ ಉಲೇಖಿಸಿದ್ದಾರೆ.
ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ ಭೌತಿಕವಾಗಿ ಪ್ರಕರಣ ದಾಖಲಿಸುವಾಗ ಅಥವಾ ವಾಹನಗಳ ತಪಾಸಣೆ ಮಾಡುವಾಗ ಪೊಲೀಸರು ರಿಪ್ಲೆಕ್ಟಿವ್ ಜಾಕೆಟ್ ಧರಿಸುವುದು. ವಾಹನ ತಪಾಸಣೆ ಸಂದರ್ಭ ಬಾಡಿವೋರ್ನ್ ಕೆಮರಾ ಧರಿಸಬೇಕು. ಟ್ರಾಫಿಕ್ ಮ್ಯಾನೇಜ್ಮೆಂಟ್ ಸೆಂಟರ್ ಅಥವಾ ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್ ಮೆಂಟ್ ಸಿಸ್ಟಂ ಹೊಂದಿರುವ ಘಟಕಗಳಲ್ಲಿ ಆದಷ್ಟು ಸಂಪರ್ಕ ರಹಿತ ಪ್ರಕರಣಗಳನ್ನು ದಾಖಲಿಸಬೇಕು. ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಾಲಕಾಲಕ್ಕೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು.
ಹೆದ್ದಾರಿಗಳು ಹಾಗೂ ಇತರ ರಸ್ತೆಗಳಲ್ಲಿ ಯಾವುದೇ ಕಾರಣಕ್ಕೂ ಅತಿ ವೇಗವಾಗಿ ಚಲಿಸುವ ವಾಹನಗಳನ್ನು ತಡೆಯುವ ಪ್ರಯತ್ನ ಮಾಡಬಾರದು. ವಾಹನಗಳ ವೇಗ ತಗ್ಗಿಸಲು ತಪಾಸಣೆ ಸ್ಥಳದ 100ರಿಂದ 150 ಮೀಟರ್ ಮೊದಲೇ ರಿಫೆಕ್ಟಿವ್ ರಬ್ಬರ್ ಕೋನ್ ಹಾಗೂ ಸುರಕ್ಷಾ ಸಲಕರಣೆ ಅಳವಡಿಸಿರಬೇಕು. ರಾತ್ರಿ ಮತ್ತು ತಡರಾತ್ರಿ ಸಂಚಾರ ಸಿಗ್ನಲ್ ದೀಪಗಳಿರುವ ಅಥವಾ ಜಂಕ್ಷನ್ಗಳ ಬದಿಯಲ್ಲೇ ವಾಹನ ತಪಾಸಣೆ ಮಾಡಬೇಕು. ಸಕಾರಣವಿಲ್ಲದೆ ವಾಹನಗಳನ್ನು ತಡೆಯಬಾರದು. ಕಣ್ಣಿಗೆ ಕಾಣುವ ಸಂಚಾರ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಮಾತ್ರ ವಾಹನ ನಿಲ್ಲಿಸಬೇಕು. ಜಿಗ್ ಜಾಗ್ ಮಾದರಿಯಲ್ಲಿ ಬ್ಯಾರಿಕೇಡ್ ಹಾಕಿ ವಾಹನ ತಡೆಯಬಾರದು. ರಸ್ತೆಯಲ್ಲಿ ದಿಢೀರನೆ ಅಡ್ಡಬಂದು ವಾಹನ ನಿಲ್ಲಿಸುವಂತೆ ಹೇಳಬಾರದು. ವಾಹನಗಳ ಕೀಲಿಕೈ ತೆಗೆದು ಕೊಳ್ಳಬಾರದು.